

ಹಾಸನ: ಬೇಲೂರು ಹೊರವಲಯದ ಕಲ್ಕೆರೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಸಾರಿಗೆ ಬಸ್ ಮತ್ತು ಆಲ್ಟೋ ಕಾರಿನ ನಡುವೆ ಅಪಘಾತವಾಗಿ 5 ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಭೀಕರ ಅಪಘಾತದಿಂದ ಕಾರಿನಲ್ಲಿದ್ದ 5 ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ಬೇಲೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಅಕ್ಮಲ್, ಜಿಲಾನಿ, ಖೈಫ್, ಮೋಹಿನ್ ಮತ್ತು ರಿಯಾನ್ ಮೃತ ದುರ್ದೈವಿಗಳು. ಮೊಹೀನ್ ಮತ್ತು ರಿಯಾನ್ ,ಹಾಸನದ ಎನ್ಡಿಆರ್ಕೆ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು. ಬೇಲೂರಿನ ವಿದ್ಯಾವಿಕಾಸ ಕಾಲೇಜಿನಲ್ಲಿ ಮೊಹಮ್ಮದ್ ಖೈಫ್, ಮೊಹಮ್ಮದ್ ಜಿಲಾನಿ ಮತ್ತು ಅಕ್ಮಲ್ ಓದುತ್ತಿದ್ದರು. ಬೇಲೂರಿನ ನಿವಾಸಿಗಳಾಗಿದ್ದ ಇವರೆಲ್ಲರೂ ಸ್ನೇಹಿತರು.
ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೇಲೂರಿನಿಂದ ಹಾಸನದತ್ತ ಹೊರಟಿದ್ದ ಆಲ್ಟೋ ಕಾರು ಹಾರೋಹಳ್ಳಿ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಐವರು ವಿದ್ಯಾರ್ಥಿಗಳ ಪೈಕಿ ನಾಲ್ವರರು ಸ್ಥಳದಲ್ಲೇ ದುರ್ಮರಣಕ್ಕೀಡಾದರು. ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತ್ತಾದರೂ ಮಾರ್ಗದಲ್ಲೇ ಕೊನೆಯುಸಿರೆಳೆದ.

