Friday, June 27, 2025
spot_imgspot_img
spot_imgspot_img

ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

- Advertisement -
- Advertisement -

ಹತ್ರಾಸ್ ಕಾಲ್ತುಳಿತ ಪ್ರಕರಣದ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್‌ನನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನಿನ್ನೆ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಶಂಕಿತ ಆರೋಪಿ ಸಂಜು ಯಾದವ್‌ನನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಇದಕ್ಕೂ ಮೊದಲು ಮಧುಕರ್ ಮತ್ತು ಇತರ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ಹತ್ರಾಸ್ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ನಿಪುನ್ ಅಗರ್ವಾಲ್ ತಿಳಿಸಿದ್ದಾರೆ.

ದೇವಪ್ರಕಾಶ್ ಮಧುಕರ್ ಮತ್ತು ಸಂಜು ಯಾದವ್ ಅವರನ್ನು ಇಂದು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಇಬ್ಬರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಹಾಯಕ ಪ್ರಾಸಿಕ್ಯೂಷನ್ ಅಧಿಕಾರಿ ಉಮಾ ಶಂಕರ್ ಯಾದವ್ ಮಾಹಿತಿ ನೀಡಿದ್ದಾರೆ.

ಇನ್ನು ಕಾಲ್ತುಳಿತ ಪ್ರಕರಣದಲ್ಲಿ ಈಗಾಗಲೇ ಬಂಧಿತನಾಗಿರುವ ರಾಮಪ್ರಕಾಶ್ ಶಾಕ್ಯಾ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಲಾಗಿದೆ.ಮಧುಕರ್ ಮತ್ತು ಯಾದವ್‌ನನ್ನು ನಂತರ ಬಂಧಿಸಲಾಗಿದ್ದು, ಕೆಲವು ಪೊಲೀಸ್ ವಿಚಾರಣೆಗಳು ಬಾಕಿ ಉಳಿದಿವೆ ಎಂದು ತಿಳಿದುಬಂದಿದೆ.

ಹತ್ರಾಸ್ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡವು ಶುಕ್ರವಾರ ತಡರಾತ್ರಿ ದೆಹಲಿಯ ನಜಾಫ್‌ಗಢ ಪ್ರದೇಶದಿಂದ ಮಧುಕರ್‌ನನ್ನು ಬಂಧಿಸಿದೆ. ಶಾಕ್ಯಾ ಮತ್ತು ಯಾದವ್ ಅವರನ್ನು ಶನಿವಾರ ಹತ್ರಾಸ್‌ನಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!