

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಎಂಟ್ರಿ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೇಂದ್ರ ಸಚಿವ ಕುಮಾರಸ್ವಾಮಿಗೆ ಹತ್ಯೆ ಕೇಸ್ನ ಮಾಹಿತಿ ದೊರೆತಿದ್ದು , ದರ್ಶನ್ ರಕ್ಷಣೆಗೆ ಬೇಕಾದಂತ ಎಲ್ಲಾ ವ್ಯವಸ್ಥಿತ ತಯಾರಿಯನ್ನು ಟೀಮ್ ಮಾಡಿಕೊಂಡಿತ್ತು ಎನ್ನಲಾಗಿದೆ.
ಈ ಕೇಸ್ ಮುಚ್ಚಿ ಹಾಕಲು ಪ್ಲಾನ್ ಬಗ್ಗೆ ಕೇಂದ್ರದ ಸಚಿವರಾಗಿರುವ ಕುಮಾರಸ್ವಾಮಿಗೆ ಮಾಹಿತಿ ದೊರೆತಿದ್ದು, ತಕ್ಷಣವೇ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿ ಡಿಜಿಪಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗಿದೆ.
ಪೊಲೀಸ್ ಅಧಿಕಾರಿಗಳು ಈ ಪ್ರಕರಣದಲ್ಲಿ ದಾರಿ ತಪ್ಪಬೇಡಿ ಸರ್ಕಾರ ಬಿಟ್ರು ನಾನು ಬಿಡಲ್ಲ ಎಂದು ಕೇಂದ್ರ ಸಚಿವ ಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ
ಪ್ರಾಣ ತೆಗೆದಿರುವ ಕೇಸ್ , ಆತನನ್ನು ಬಚಾವ್ ಮಾಡಿದ್ರೆ ನಾನು ಬಿಡಲ್ಲ ಎಂದು ಹಿರಿಯ ಅಧಿಕಾರಿಗಳಿಗೆ ಕುಮಾರಸ್ವಾಮಿ ವಾರ್ನಿಂಗ್ ಮಾಡಿದ್ದಾರೆ. ಕೇಂದ್ರ ಸಚಿವರ ಎಂಟ್ರಿ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.