Sunday, June 29, 2025
spot_imgspot_img
spot_imgspot_img

ಅತ್ತಿಗೆ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ಕೊಲೆಗೈದ ತಮ್ಮ..!

- Advertisement -
- Advertisement -

ತಮ್ಮನಿಂದಲೇ ಅಣ್ಣನೊಬ್ಬ ಕೊಲೆಯಾದ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳದಲ್ಲಿ ನಡೆದಿದೆ. ಗಂಗರಾಜು (35) ಹತ್ಯೆಯಾದ ದುರ್ದೈವಿ.

ಮಲಗಿದ್ದ ಗಂಗರಾಜು ತಲೆ ಮೇಲೆ‌ ಕಲ್ಲು ಎತ್ತುಹಾಕಿ ತಮ್ಮ ರವಿ ಮತ್ತು ಅತ್ತಿಗೆ ಭಾಗ್ಯಮ್ಮ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕಳೆದ 5 ವರ್ಷಗಳ ಹಿಂದೆ ತಮ್ಮ ರವಿ ಅತ್ತಿಗೆ ಭಾಗ್ಯಮ್ಮಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಷಯ ತಿಳಿದ ಗಂಗರಾಜು ತನ್ನ ಮೂರು ಮಕ್ಕಳನ್ನು ಅನಾಥಾಶ್ರಮಕ್ಕೆ ಬಿಟ್ಟಿದ್ದ.

ಕಳೆದ 15 ದಿನಗಳ ಹಿಂದೆ ಪತ್ನಿ ಭಾಗ್ಯಮ್ಮ ಮತ್ತು ತಮ್ಮ ರವಿಯೊಂದಿಗೆ ಗಂಗರಾಜು ಗಲಾಟೆ ಮಾಡಿಕೊಂಡಿದ್ದ. ಈ ವೇಳೆ ಮೂವರು ಹೊಡೆದಾಡಿಕೊಂಡಿದ್ದರು. ಬಳಿಕ ಸಿಟ್ಟಿಗೆದ್ದ ರವಿ ಸೋಮವಾರ ರಾತ್ರಿ ಬಂದು ಗಂಗರಾಜು ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿದ್ದಾನೆ ಎನ್ನಲಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬೆಳವಂಗಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

- Advertisement -

Related news

error: Content is protected !!