Friday, May 3, 2024
spot_imgspot_img
spot_imgspot_img

ತಂದೆಯ ಕಿರುಕುಳದಿಂದ ಮನನೊಂದು ನರ್ಸ್‌ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನರ್ಸ್‌ವೊಬ್ಬರು ತಮ್ಮ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ನರ್ಸ್ ಮಾಚೋಹಳ್ಳಿ ನಿವಾಸಿ ಸುಚಿತ್ರ (23) ಎಂದು ಗುರುತಿಸಲಾಗಿದೆ.

ಇವರು ಮೂಲತಃ ಮೈಸೂರಿನ ನಂಜನಗೂಡಿನವರು, ನರ್ಸಿಂಗ್ ಮುಗಿಸಿ ಪೂಜಾ ಆಸ್ಪತ್ರೆಯಲ್ಲಿ ವೃತ್ತಿ ಆರಂಭಿಸಿದ್ದರು. ಬಂದ ದುಡ್ಡನ್ನೆಲ್ಲ ಮನೆಗೆ ಕಳುಹಿಸುತ್ತಿದ್ದರು. ಆದರೆ ಕುಡುಕ ತಂದೆ ಕಳುಹಿಸಿದ್ದ ಹಣವನ್ನೆಲ್ಲೆ ಕುಡಿತಕ್ಕೆ ಬಳಸಿಕೊಳ್ಳುತ್ತಿದ್ದ. ಮನೆಯಲ್ಲಿ ನೆಮ್ಮದಿ ಕೆಡಿಸಿದ್ದ, ಅಲ್ಲದೆ ತನ್ನ ಕುಡಿತದ ಚಟಕ್ಕೆ ಮತ್ತಷ್ಟು ಹಣ ಬೇಕು ಎಂದು ಪೀಡಿಸುತ್ತಿದ್ದ. ತಂದೆಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆಯ ಬಗ್ಗೆ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!