Thursday, May 2, 2024
spot_imgspot_img
spot_imgspot_img

ಕೆಎಸ್‌ಆರ್‌ಟಿಸಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರರಿಬ್ಬರು ಮೃತ್ಯು

- Advertisement -G L Acharya panikkar
- Advertisement -

ಕೆಎಸ್‌ಆರ್‌ಟಿಸಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದ ಬಳಿ ನಡೆದಿದೆ.

ತಮ್ಮ ಸೋದರನ ಮದುವೆಯ ನಿಶ್ಚಿತಾರ್ಥದಲ್ಲಿ ಭಾಗವಹಿಸಿದ ಖುಷಿಯಲ್ಲಿದ್ದ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದಾವಲಸಾಬ್ ಹುಸೇನಸಾಬ್ ಮ್ಯಾಗೇರಿ(28), ಹಸನಸಾಬ್ ಹುಸೇನಸಾಬ್ ಖಾನಗೌಡರ್ (25) ಮೃತಪಟ್ಟ ದುರ್ದೈವಿಗಳು. ಇವರು ಕೊಪ್ಪಳ ಜಿ.ಕುಷ್ಟಗಿ ತಾಲೂಕಿನ ಕಲಾಲಬಂಡಿ ಗ್ರಾಮದವರಾಗಿದ್ದು, ರೋಣ ತಾಲೂಕಿನ ಸವಡಿ ಗ್ರಾಮದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು.

ಇವರ ಸಹೋದರನ ವಿವಾಹ ನಿಶ್ಚಿತಾರ್ಥ ರೋಣದ ಬಳಿ ನಡೆದಿತ್ತು. ಸಹೋದರನ ನಿಶ್ಚಿತಾರ್ಥ ಮಗಿಸಿಕೊಂಡು ವಾಪಸ್ ಬರುವ ವೇಳೆ ದುರ್ಘಟನೆ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಸಿಂಧನೂರಿನಿಂದ ಗಜೇಂದ್ರಗಡಕ್ಕೆ ಬರುತ್ತಿತ್ತು.

- Advertisement -

Related news

error: Content is protected !!