Sunday, June 29, 2025
spot_imgspot_img
spot_imgspot_img

ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಹೃದಯಾಘಾತ; ವ್ಯಕ್ತಿ ಮೃತ್ಯು

- Advertisement -
- Advertisement -

ಬೆಂಗಳೂರು : ತೆಂಗಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಜಯಶ್ರೀ ಬಡಾವಣೆಯ ವೆಂಕಟರಮಣ ದೇವಸ್ಥಾನ ಸಮೀಪ ನಡೆದಿದೆ. ಮೈಲಸಂದ್ರ ನಿವಾಸಿ ನಾರಾಯಣಪ್ಪ (60) ಮೃತಪಟ್ಟಿದ್ದು , ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕ್ರೇನ್ ವಾಹನದ ಸಹಾಯದಿಂದ ಮೃತದೇಹವನ್ನು ಕೆಳಗಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಕೆಂಗೇರಿ ಪೊಲೀಸರು ನಾರಾಯಣಪ್ಪ ಅವರು ಸೋಮವಾರ ಬೆಳಿಗ್ಗೆ 7.30ರ ಸುಮಾರಿಗೆ ವಿಜಯಶ್ರೀ ಬಡಾವಣೆಯ ವೆಂಕಟರಮಣ ದೇವಸ್ಥಾನದ ಸಮೀಪದ ಸುಮಾರು 40 ಅಡಿ ಎತ್ತರದ ತೆಂಗಿನ ಮರ ಏರಿದ್ದರು.

ಮರದ ಟೊಂಗೆ ಮೇಲೆ ಕುಳಿತು ಕಾಯಿ ಕೀಳುತ್ತಿದ್ದಾಗ ಕುಳಿತ ಸ್ಥಳದಲ್ಲೇ ಏಕಾಏಕಿ ಪ್ರಜ್ಞೆ ತಪ್ಪಿದ್ದರು. ಹಲವು ನಿಮಿಷವಾದರೂ ಕೆಳಗೆ ಇಳಿದಿರಲಿಲ್ಲ. ಮೊಬೈಲ್‌ಗೆ ಕರೆ ಮಾಡಿದರೂ ಪ್ರತಿಕ್ರಿಯಿಸಿರಲಿಲ್ಲ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಕ್ರೇನ್ ಮೂಲಕ ಮೇಲಕ್ಕೆ ಹೋಗಿ ನೋಡಿದಾಗ, ನಾರಾಯಣಪ್ಪ ಮೃತಪಟ್ಟಿದ್ದು ಗೊತ್ತಾಯಿತು. ಬಳಿಕ ಮೃತದೇಹವನ್ನು ಕೆಳಗೆ ಇಳಿಸಲಾಯಿತು’ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಹೃದಯಾಘಾತದಿಂದ ನಾರಾಯಣಪ್ಪ ಅವರು ಮೃತಪಟ್ಟಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!