Saturday, May 4, 2024
spot_imgspot_img
spot_imgspot_img

ಚಲಿಸುತ್ತಿದ್ದ ವಾಹನದಲ್ಲೇ ಹೃದಯಾಘಾತ; ಯುವಕ ಮೃತ್ಯು..!!

- Advertisement -G L Acharya panikkar
- Advertisement -

ಚಲಿಸುತ್ತಿದ್ದ ವಾಹನದಲ್ಲೇ ಹೃದಯಾಘಾತವಾಗಿ ಚಾಲಕ ಸಾವನ್ನಪ್ಪಿರುವ ದಾರುಣ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಬಳಿ ನಡೆದಿದೆ.

ರವಿಕುಮಾರ್ (28) ಮೃತ ದುರ್ದೈವಿ ಯುವಕನಾಗಿದ್ದಾನೆ.

ಈತ ವಿರಾಜಪೇಟೆ ಹೊರವಲಯದ ಬಿಟ್ಟಾಂಗಲ ಬಳಿಯ ಪೆಗ್ಗರಿಕಾಡು ನಿವಾಸಿಯಾಗಿದ್ದು, ಪಿಕಪ್​ ವಾಹನ ಚಲಾಯಿಸಿಕೊಂಡು ಗೋಣಿಕೊಪ್ಪದಿಂದ ವಿರಾಜಪೇಟೆ ಕಡೆ ಬರುತ್ತಿದ್ದನು.

ಈ ವೇಳೆ ಪಿಕ್ ಅಪ್ ವಾಹನದಲ್ಲಿ ತೆರಳುತ್ತಿದ್ದಾಗ ಜೋರಾದ ಎದೆನೋವು ಕಾಣಿಸಿಕೊಂಡಿದೆ. ವಿರಾಜಪೇಟೆ ಕಡೆ ಬರುತ್ತಿದ್ದ ಸಂದರ್ಭ ಹೃದಯಾಘಾತವಾಗಿ ರವಿಕುಮಾರ್ ತನ್ನ ವಾಹನದಲೇ ​​ಮೃತಪಟ್ಟಿದ್ದಾನೆ.

- Advertisement -

Related news

error: Content is protected !!