ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಲಕ್ನೋನ ವಿಶೇಷ ನ್ಯಾಯಾಲಯ ಇಂದು ಹೊರಡಿಸಿರುವ ತೀರ್ಪನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಬಿಜೆಪಿ ಧುರೀಣ ಎಲ್.ಕೆ ಅಡ್ವಾಣಿ ಅವರು ಶ್ಲಾಘಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿ ಅಡ್ವಾಣಿ ಅವರು ನ್ಯಾಯಾಲಯದ ಆದೇಶವನ್ನು ಆಲಿಸಿದ್ದಾರೆ, ರಾಮ ಜನ್ಮಭೂಮಿ ಚಳುವಳಿ ಸಂಬಂಧ ನನ್ನ ಹಾಗೂ ಭಾರತೀಯ ಜನತಾ ಪಕ್ಷದ ವಿಶ್ವಾಸ ಹಾಗೂ ಬದ್ಧತೆಗೆ ಜಯ ಸಿಕ್ಕಂತಾಗಿದೆ ಎಂದಿದ್ದಾರೆ.
ಅಲ್ಲೇ ನನ್ನ ಪಕ್ಷದ ಕಾರ್ಯಕರ್ತರು, ನಾಯಕರು ಹಾಗೂ ಸಾಧು ಸಂತರು ಮತ್ತು ಅಯೋಧ್ಯೆ ಯಾತ್ರೆ ತಮ್ಮ ನಿಸ್ವಾರ್ಥ ನನಗೆ ಶಕ್ತಿ ನೀಡುತ್ತದೆ ಎಂದು ಸಕ್ರಿಯವಾಗಿ ತೊಡಗಿದ್ದ ಎಲ್ಲರಿಗೂ ನನ್ನ ಧನ್ಯವಾದಗಳು.
ಜಂಟಿ ಪ್ರಯತ್ನಗಳನ್ನು ಪಕ್ಷದ ಮುಖಂಡರು, ವೀಕ್ಷಕರು ಮತ್ತು ಅವರ ಕಾನೂನು ತಂಡಕ್ಕೂ ಅವರು ಧನ್ಯವಾದಗಳನ್ನು ಅರ್ಪಿಸಿದರು. ರಾಮ ಮಂದಿರಕ್ಕೆ ಅಯೋಧ್ಯೆಯಲ್ಲಿ ಅಡಿಪಾಯ ಹಾಕುವ ಸಮಾರಂಭಕ್ಕೆ ನಡೆಯಲು ಈ ಚಳುವಳಿ ಕಾರಣವಾಯಿತು. ಸದ್ಯ ನನ್ನ ದೇಶದ ಕೋಟಿಗಟ್ಟಲೇ ಜನರೊಂದಿಗೆ ಅಯೋಧ್ಯೆಯಲ್ಲಿ ತಲೆ ಎತ್ತಲಿರುವ ಭವ್ಯ ರಾಮ ಮಂದಿರದ ಸೌಂದರ್ಯ ಕಣ್ತುಂಬಿಕೊಳ್ಳಲು ಕಾಯುತ್ತಿದ್ದೇನೆ ಎಂದಿದ್ದಾರೆ.