- Advertisement -
- Advertisement -



ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಾದ್ಯಂತ ನಿನ್ನೆ(ಶನಿವಾರ) ಸುರಿದ ಮಳೆಗೆ ಹಲವಾರು ಅವಾಂತರಗಳಾಗಿದ್ದು, 50 ರಿಂದ 100 ಮನೆಗಳಿಗೆ ಜಲದಿಗ್ಬಂಧನ ಉಂಟಾಗಿದೆ. ಇನ್ನು ಕೆಲವು ಮನೆಗಳಿಗೆ ನೀರು ಹೊಕ್ಕಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಜು.14 ರಿಂದ 18 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ.
ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಡಿಸಿ ಲಕ್ಷ್ಮೀಪ್ರಿಯ ಅವರು ತಿಳಿಸಿದ್ದಾರೆ.
- Advertisement -