- Advertisement -
- Advertisement -
ಕಾರ್ಕಳ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾಧಿಕಾರಿಗಳಲ್ಲಿ ಪೈಕಿ ಲೆ.ಕ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯ ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ಕಳ ಪುರಸಭೆ ಮಾಜಿ ಉಪಾಧ್ಯಕ್ಷ ದಿ.ಫಿಲಿಪ್ಸ್ ಮಿನೇಜಸ್ ಹಾಗೂ ಮೇರಿ ಮಿನೇಜಸ್ ಅವರ ಪುತ್ರಿ ಕ್ಯಾ.ಪ್ರಫುಲ್ಲಾ ಮಿನೇಜಸ್ ಅವರ ಪತಿ ಎಂದು ತಿಳಿದು ಬಂದಿದೆ.
ಪ್ರಫುಲ್ಲಾ ಮಿನೇಜಸ್ ಲೆ.ಕ ಹರ್ಜಿಂದರ್ ಸಿಂಗ್ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ವಿವಾಹದ ನಂತರ ಲೆ.ಕ ಸಿಂಗ್ ಅವರು ಕಾರ್ಕಳದ ಮಾವನ ಮನೆಗೂ ಬಂದಿದ್ದರು ಎಂದು ಪ್ರಫುಲ್ಲಾ ಮಿನೇಜಸ್ ಅವರ ಬಂಧುಗಳು ಹೇಳಿದ್ದಾರೆ. ಪ್ರಫುಲ್ಲಾ ಅವರು ಭೂಸೇನೆಯ ಅಧಿಕಾರಿ ಆಗಿದ್ದರು ಎಂದು ಕುಟುಂಬದ ಮೂಲಗಳು ಹೇಳಿವೆ.
- Advertisement -