Friday, April 26, 2024
spot_imgspot_img
spot_imgspot_img

ದಕ್ಷಿಣ ಕನ್ನಡ-ಕಾಸರಗೋಡು ಜಿಲ್ಲೆ ನಡುವೆ ಸಂಚಾರ ನಿರ್ಬಂಧ: ಕೇಂದ್ರ, ರಾಜ್ಯಕ್ಕೆ ಹೈ ಕೋರ್ಟ್‌ ನೋಟಿಸ್

- Advertisement -G L Acharya panikkar
- Advertisement -

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಕಾಸರಗೋಡಿನ ವಕೀಲ ಬಿ.ಸುಬ್ಬಯ್ಯ ರೈ ಸಲ್ಲಿಸಿರುವ ಅರ್ಜಿಯು ಮುಖ್ಯ ನ್ಯಾ. ಎ.ಎಸ್‌.ಓಕ್‌ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಅರ್ಜಿ ಕುರಿತು ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

2021ರ ಜ. 27ರಂದು ಅನ್‌ಲಾಕ್‌ 4.0 ಮಾರ್ಗ ಸೂಚಿಗಳನ್ನು ಹೊರಡಿಸಿದೆ. ಅದರಲ್ಲಿ ಜನರ ಮತ್ತು ಪ್ರಯಾಣಿಕರ ಅಂತರ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ, ಫೆ.18ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯು ಕೇರಳದ ಕಾಸರಗೋಡು ಜಿಲ್ಲೆಯಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವಜನಿಕರ ಸಂಚಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಕೇಂದ್ರ ಸರಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

- Advertisement -

Related news

error: Content is protected !!