Saturday, June 28, 2025
spot_imgspot_img
spot_imgspot_img

ಕಾರ್ಕಳ: ಮುಂದಿನ ನಾಲ್ಕು ತಿಂಗಳ ಒಳಗೆ ‘ಪರಶುರಾಮ್ ಥೀಂ ಪಾರ್ಕ್’ ಕಾಮಗಾರಿ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಕಾರ್ಕಳ: ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಉಡುಪಿ ನಿರ್ಮಿತಿ ಕೇಂದ್ರಕ್ಕೆ ‘ಹೈ’ ನಿರ್ದೇಶನ ನೀಡಿದೆ.

ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಅದು ನಕಲಿ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಹಿತ ಚರ್ಚೆ ಮಾಡಿದ್ದರು. ಕಾರ್ಕಳದ ಅಭಿವೃದ್ಧಿಯನ್ನು ಸಹಿಸದ ಕಿಡಿಗೇಡಿಗಳು ಇಂತಹ ಕೃತ್ಯ ಮಾಡಿದ್ದಾರೆಂದು ಹಾಲಿ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಬೆನ್ನಲ್ಲೇ ಪರಶುರಾಮನ ಪ್ರತಿಮೆ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಮೂ.ಎಂ.ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಇದರೊಂದಿಗೆ ಕಳೆದೊಂದು ವರ್ಷದಿಂದ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ. ತಾವು ಕಂಚಿನ ಪ್ರತಿಮೆಯನ್ನೇ ನಿರ್ಮಿಸಿದ್ದು, ಬಾಕಿ ಕೆಲಸ ಪೂರ್ಣಗೊಳಿಸುವುದಕ್ಕೆ ಸೂಕ್ತ ಭದ್ರತೆ ಹಾಗೂ ಅನುಕೂಲಕರ ವಾತಾವರಣ ನಿರ್ಮಿಸಿಕೊಡುವಂತೆ ಕೃಷ್ಣ ನಾಯ್ಕ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ಪ್ರಕಟಗೊಂಡ ನಾಲ್ಕು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶ ನೀಡಿದೆ.

- Advertisement -

Related news

error: Content is protected !!