Monday, May 13, 2024
spot_imgspot_img
spot_imgspot_img

“ಮಂಗಳೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ಎಚ್ಚರಿಕೆ !

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ: ಮಂಗಳೂರು ಮಹಾನಗರ ಪಾಲಿಕೆ ಸೂಕ್ತ ರೀತಿಯಲ್ಲಿ ಘನತ್ಯಾಜ್ಯವನ್ನು ವಿಲೇವಾರಿ ಮಾಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆಗೆ ಹೈಕೋರ್ಟ್​​ ಎಚ್ಚರಿಕೆ ನೀಡಿದೆ. ನಿಗದಿತ ಸಮಯದಲ್ಲಿ ತ್ಯಾಜ್ಯ ವಿಲೇವಾರಿ ಮಾಡದಿದ್ರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಾರ್ನಿಂಗ್​ ಕೊಟ್ಟಿದೆ.


ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದಲ್ಲಿ ಪಾಲಿಕೆ ಸಿಬ್ಬದಿ ಸರಿಯಾಗಿ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿಲ್ಲ. ಪ್ರತಿ ನಿತ್ಯ 200 ಮೆಟ್ರಿಕ್ ಟನ್ ಘನ ತ್ಯಾಜ್ಯವನ್ನು ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಹೈಕೋರ್ಟ್​​ನಲ್ಲಿ ಪಿಐಎಲ್ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ. ಅರ್ಜಿದಾರರ ಪ್ರಶ್ನೆಗೆ ಉತ್ತರಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ.

- Advertisement -

Related news

error: Content is protected !!