Monday, June 30, 2025
spot_imgspot_img
spot_imgspot_img

ಹಿಂದೂ ಜಾಗರಣ ವೇದಿಕೆಯ ಮುಖಂಡರಿಗೆ ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯಿಂದ ಬಂದಿರುವ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು-ಹರಿಪ್ರಸಾದ್ ಯಾದವ್

- Advertisement -
- Advertisement -

ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿರುವ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕರಾದ ನರಸಿಂಹ ಮಾಣಿ ಮತ್ತು ರಕ್ಷಿತ್ ಬುಡೋಳಿಯವರಿಗೆ ಪಾಕಿಸ್ಥಾನದಲ್ಲಿ ಸಕ್ರೀಯವಾಗಿರುವ ಜೈ ಶೆ ಮೊಹಮ್ಮದ್ ಉಗ್ರವಾದಿ ಸಂಘಟನೆಯ ಹೆಸರಿನಲ್ಲಿ ಬೆದರಿಕೆ ಬಂದಿರುವ ವಿಚಾರವನ್ನು ಪೋಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ ಹೇಳಿದ್ದಾರೆ.

ಜೈ ಶೆ ಮೊಹಮ್ಮದ್ ಹೆಸರಿನ ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕವಿರುವ ಕರಾವಳಿಯ ಸ್ಲೀಪರ್ ಸೆಲ್ ಗಳನ್ನು ಪತ್ತೆ ಹಚ್ಚುವ ಕಾರ್ಯವನ್ನು ಪೋಲೀಸ್ ಇಲಾಖೆ ಮಾಡಬೇಕು ಮತ್ತು ಮಾಡುತ್ತಾರೆ ಎನ್ನುವ ವಿಶ್ವಾಸ ಇದೆ,ಆಡಳಿತ ನಡೆಸುವ ಸರಕಾರ ಇಂತಹ ವಿಷಯದಲ್ಲಿ ಮೌನವಹಿಸಿದರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಸಮಾಜಘಾತುಕ ವ್ಯಕ್ತಿಗಳನ್ನು ಹೆಡೆಮುರಿಕಟ್ಟುವ ಪೋಲೀಸ್ ಅಧಿಕಾರಿಗಳು ಜಿಲ್ಲೆಯಲ್ಲಿ ಇದ್ದಾರೆ ಎನ್ನುವ ವಿಶ್ವಾಸ ಹಿಂದೂ ಸಮಾಜಕ್ಕೆ ಇದೆ ಎನ್ನುವ ಭರವಸೆ ಇದೆ. ಎಂದು ಹೇಳಿದರು. ನರಸಿಂಹ ಮಾಣಿಯವರಂತ ಕಾರ್ಯಕರ್ತರು ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂದು ರಾಷ್ಟ್ರ ರಕ್ಷಣೆ,ಧರ್ಮರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಮೇಲೆ ಇಂತಹ ಬೆದರಿಕೆಗಳನ್ನು ಹಾಕಿದರೆ ಹಿಂದೂ ಸಮಾಜ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದರು.

- Advertisement -

Related news

error: Content is protected !!