ವೇಣೂರು: ಹಿಂದು ಜಾಗರಣ ವೇದಿಕೆ ವೇಣೂರು ತಾಲೂಕು ಮತ್ತು ಪುತ್ತೂರು ಜಿಲ್ಲೆಯ ನೂತನ ತಾಲೂಕು ಸಮಿತಿಯ ಉದ್ಘಾಟನಾ ಕಾರ್ಯಕ್ರಮವು ನಿನ್ನೆ ವೇಣೂರಿನ ಭರತೇಶ ಸಭಾ ಭವನದಲ್ಲಿ ನಡೆಯಿತು. ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ಮಾಡಿದರು
ವೇದಿಕೆಯಲ್ಲಿ ನಿಯೋಜಿತ ಸಂಘ ಚಾಲಕರಾದ ಗುರು ನಂದನ್, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಜಗದೀಶ್ ನೆತ್ತರಕೆರೆ ಉಪಸ್ಥಿತರಿದ್ದರು. ಹಿಂದೂ ಜಾಗರಣ ವೇದಿಕೆ ವಿಭಾಗ ಪ್ರಧಾನ ಕಾರ್ಯದರ್ಶಿಯಾದ ಪ್ರಕಾಶ್ ಕುಕ್ಕೆಹಳ್ಳಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಭಾಗ ಮಾತೃ ಸುರಕ್ಷಾ ಪ್ರಮುಖ್ ಗಣರಾಜ್ ಭಟ್ ಕೆದಿಲ ಸಂಘಟನೆ ನಡೆದು ಬಂದ ಹಾದಿಯನ್ನು ವಿವರಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘ ದ ಜಿಲ್ಲಾ ವ್ಯವಸ್ಥಾ ಪ್ರಮುಖ್ ಸ್ವಾಮೀಜಿ ಯವರಿಗೆ ಗೌರವ ಅರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆ ಯ ಪ್ರಾಂತ ಸಂಪರ್ಕ್ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ರೈ ಪುತ್ತೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ, ಜಿಲ್ಲಾ ಉಪಾಧ್ಯಕ್ಷರಾದ ವೆಂಕಟರಮಣ ಕಡಬ.
ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಕಲಾಯಿ, ಜಿಲ್ಲಾ ಕಾರ್ಯದರ್ಶಿ ಚಂದ್ರ ಕಲಾಯಿ, ಜಿಲ್ಲಾ ಮಾತೃ ಸುರಕ್ಷಾ ಸಂಯೋಜಕ್ ರಾಜೇಶ್ ಪಂಚೋಡಿ, ಜಿಲ್ಲಾ ನ್ಯಾಯ ಜಾಗರಣ ಸಂಯೋಜಕ್ ರಾಜೇಶ್ ಬೊಳ್ಳುಕಲ್ಲು, ಜಿಲ್ಲಾ ಹಿಂದೂ ಯುವ ವಾಹಿನಿ ಸಂಯೋಜಕ್ ಪ್ರಶಾಂತ್ ಕೆಂಪುಗುಡ್ಡೆ, ಉಡುಪಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಬೈಲೂರೂ ಉಪಸ್ಥಿತರಿದ್ದರು.ವೇಣೂರು ತಾಲೂಕು ಕಾರ್ಯದರ್ಶಿ ರಕ್ಷಿತ್ ಶಾವ್ಯ ಸ್ವಾಗತಿಸಿದರು.
ತಾಲೂಕು ಉಪಾಧ್ಯಕ್ಷರಾದ ನಿರಂಜನ್ ವಂದಿಸಿದರು. ಕುಮಾರಿ ಪ್ರಜ್ಞಾ ವೈಯಕ್ತಿಕ ಗೀತೆ ಮತ್ತು ವಂದೇಮಾತರಂ ಹಾಡಿದರು. ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಶೆಟ್ಟಿ ಮಾಣಿ ಕಾರ್ಯಕ್ರಮ ನಿರೂಪಿಸಿದರು. ವೇಣೂರು ತಾಲೂಕಿನ ಎಲ್ಲಾ ಕಾರ್ಯಕರ್ತರು ಘಟಕ ಸಮಿತಿಯ ಪದಾಧಿಕಾರಿಗಳು ಹಾಗೂ ರಾಷ್ಟ್ರಭಕ್ತ ಬಂಧುಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.