- Advertisement -
- Advertisement -
ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೈಲರ್ನ ಭೀಕರ ಹತ್ಯೆಗೆ ದೇಶಾದ್ಯಂತ ಜನರು ಹಲವೆಡೆ ಪ್ರತಿಭಟನೆಯನ್ನು ನಡೆಸುತ್ತಿದ್ದು, ಹಲವರು ಭಿನ್ನ ವಿಭಿನ್ನ ರೀತಿಯಲ್ಲಿ ಅಭಿಯಾನವನ್ನು ಮಾಡಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಬಹುಭಾಷಾ ನಟಿ ಪ್ರಣಿತಾ ಸುಭಾಶ್ ಕೂಡಾ ಹಿಂದೂ ಲಿವ್ಸ್ ಮ್ಯಾಟರ್ ಎಂದು ಬರೆದಿರುವ ಫಲಕ ಹಿಡಿದುಕೊಂಡು ಕೃತ್ಯವನ್ನು ಖಂಡಿಸಿದ್ದಾರೆ. ಇಸ್ ಎನಿವನ್ ಲಿಸನಿಂಗ್? ಎಂಬ ಕ್ಯಾಪ್ಶನ್ನೊಂದಿಗೆ ಫೋಟೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಮತಾಂಧತೆಗೆ ಹಿಂದೂ ಜೀವಗಳ ಬಲಿ ಕೊಡಬೇಡಿ ಎಂದು ಸಂದೇಶ ಸಾರಿದ್ದಾರೆ.
ಕನ್ಹಯ್ಯಾ ಲಾಲ್ ಹತ್ಯೆ ಖಂಡಿಸಿ ನಂಜನಗೂಡಿನಲ್ಲೂ ಕೆಲ ವ್ಯಾಪಾರಿಗಳು ನನ್ನ ಕತ್ತು ಸೀಳಬೇಡಿ ಎಂದು ಬೋರ್ಡ್ ಹಿಡಿದುಕೊಂಡು ಅಭಿಯಾನ ಪ್ರಾರಂಭಿಸಿದ್ದಾರೆ. ನಾನು ಸತ್ಯ ಹೇಳಲ್ಲ. ಹೇಳಿದವರ ಪರ ನಿಲ್ಲುವುದೂ ಇಲ್ಲ. ನನ್ನ ಕುಟುಂಬ ನನ್ನನ್ನೇ ನಂಬಿಕೊಂಡಿದೆ. ನನ್ನ ಕತ್ತನ್ನು ಸೀಳಬೇಡಿ ಎಂದು ಪೋಸ್ಟರ್ ಹಿಡಿದುಕೊಂಡು ಹಲವರು ಟೈಲರ್ ಹತ್ಯೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
- Advertisement -