- Advertisement -
- Advertisement -
ಮಂಗಳೂರು: ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನೋರ್ವನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ.
ಆರೋಪಿ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು ಬಂದಿದೆ. ಘಟನೆಯು ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು ಶುಕ್ರವಾರ ಬೆಳಕಿಗೆ ಬಂದಿದೆ .
ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮನೆಯವರು ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಸ್ನಾನ ಮಾಡುವ ವೀಡಿಯೊ ಮಾಡಿದ್ದ ಮೊಬೈಲ್ ಸಹಿತ ಆತನನ್ನು ವಶಕ್ಕೆ ಪಡೆದಿದ್ದಾರೆ.
- Advertisement -