- Advertisement -
- Advertisement -
ಮಂಗಳೂರು: ನಗರದ ವಿವಿಧ ದೈವಸ್ಥಾನದ ಕಾಣಿಕೆ ಹುಂಡಿಗಳಲ್ಲಿ ಕೀಡಿಗೇಡಿಗಳು ನಕಲಿ ನೋಟುಗಳಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಬರಹದ ನಕಲಿ ನೋಟುಗಳು ಪತ್ತೆಯಾಗಿರುವ ಘಟನೆ ನಡೆದಿದೆ.
ನಗರದ ಕೆಲ ದೈವಸ್ಥಾನಗಳಲ್ಲಿ ಇದೇ ರೀತಿಯಲ್ಲಿ ಅವಹೇಳನಕಾರಿ ಬರಹ ಬರೆದಿರುವ ಕೃತ್ಯ ನಡೆದಿದ್ದು, ನಗರದ ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಗುಡ್ಡೆ ಬಬ್ಬುಸ್ವಾಮಿ ಕ್ಷೇತ್ರ ಸೇರಿದಂತೆ ನಗರದ ಕೆಲ ದೈವಸ್ಥಾನದಲ್ಲಿ ಇಂತಹ ಪ್ರಕರಣ ನಡೆದಿದೆ ಎನ್ನಲಾಗಿದೆ. ಕ್ರೈಸ್ತ ಧರ್ಮ ಪ್ರತಿಪಾದಿಸಿ ಬರಹ ಬರೆದಿರುವ ದುಷ್ಕರ್ಮಿಗಳು , ಹಿಂದೂ ಧರ್ಮವನ್ನು ಅವಹೇಳನ ಮಾಡುವುದರ ಜೊತೆಗೆ ಬಳಸಿದ ಕಾಂಡೋಮ್ ನ್ನು ಕಾಣಿಕೆ ಡಬ್ಬಿಗೆ ಹಾಕುವ ಮೂಲಕ ವಿಕೃತಿ ಮೇರೆದಿದ್ದಾರೆ. ಮಂಗಳೂರಿನಲ್ಲಿ ಇಂತಹ ದುಷ್ಕೃತ್ಯ ನಡೆದಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
- Advertisement -