Monday, April 29, 2024
spot_imgspot_img
spot_imgspot_img

ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಗೂಡ್ಸ್ ರೈಲಿಗೆ ಡಿಕ್ಕಿ; ಇಬ್ಬರು ಮಕ್ಕಳು ಮೃತ್ಯು

- Advertisement -G L Acharya panikkar
- Advertisement -

ನಾಯಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸೋದರಸಂಬಂಧಿಗಳು ಸಾವನ್ನಪ್ಪಿದ ಘಟನೆ ರಾಜಸ್ತಾನದ ಜೋಧ್‌ಪುರದಲ್ಲಿ ನಡೆದಿದೆ.

ಮಾಹಿತಿ ಪ್ರಕಾರ ಅನನ್ಯಾ (12) ಮತ್ತು ಯುವರಾಜ್ ಸಿಂಗ್ (14) ಗಣೇಶ್ ಪುರ ಮತ್ತು ಬನಾರ್ ನಿವಾಸಿಗಳಾಗಿದ್ದು, ಆರ್ಮಿ ಚಿಲ್ಡ್ರನ್ ಅಕಾಡೆಮಿಯಲ್ಲಿ 5 ಮತ್ತು 7 ನೇ ತರಗತಿಯಲ್ಲಿ ಓದುತ್ತಿದ್ದರು.

ಮೂವರು ಸ್ನೇಹಿತರೊಂದಿಗೆ ಅವರು ಶಾಲೆಯಿಂದ ವಾಪಸಾಗುತ್ತಿದ್ದ ವೇಳೆ ನಾಯಿಗಳು ಹಿಂಬಾಲಿಸಲು ಆರಂಭಿಸಿವೆ. ಗಾಬರಿಗೊಂಡ ಮಕ್ಕಳು ಭಯಭೀತರಾಗಿ ಓಡಲು ಆರಂಭಿಸಿದ್ದಾರೆ. ಓಡುತ್ತಿರುವಾಗ ರೈಲ್ವೇ ಟ್ರ್ಯಾಕ್ ತಲುಪಿದ ಅವರಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಅನನ್ಯಾ ಮತ್ತು ಯುವರಾಜ್ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪಘಾತದ ಬಗ್ಗೆ ಮಾಹಿತಿ ಪಡೆದ ಬಾಲಕಿಯ ತಂದೆ ಪ್ರೇಮ್ ಸಿಂಗ್ ಮತ್ತು ಇತರ ಕುಟುಂಬ ಸದಸ್ಯರು ಸ್ಥಳಕ್ಕೆ ಧಾವಿಸಿದ್ದರು. ಯುವರಾಜ್ ತಂದೆ ಮದನ್ ಸಿಂಗ್ ಕರ್ನಾಟಕದಲ್ಲಿದ್ದಾರೆ. ಅಪಘಾತದ ಬಗ್ಗೆ ಅವರಿಗೆ ಕರೆ ಮಾಡಿ ಮಾಹಿತಿ ನೀಡಲಾಯಿತು. ಜೋಧ್‌ಪುರ ಮುನ್ಸಿಪಲ್ ಕಾರ್ಪೊರೇಷನ್ ತಂಡ ನಾಯಿಗಳನ್ನು ಹಿಡಿದ ನಂತರವೇ ಕುಟುಂಬ ಸದಸ್ಯರು ಶವಗಳನ್ನು ಪಡೆದುಕೊಡಿದ್ದಾರೆ.

- Advertisement -

Related news

error: Content is protected !!