- Advertisement -
- Advertisement -



ಭಾರತದ 78ನೇ ಸ್ವಾತಂತ್ರ್ಯ ದಿನವಾದ ಇಂದು ಕೆಂಪು ಕೋಟೆಯಿಂದ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಧ್ವಜಾರೋಹಣದ ಬಳಿಕ ಅವರು ಭಾಷಣ ಮಾಡಲಿದ್ದಾರೆ. ಮೋದಿ 11ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡುತ್ತಿರುವುದು ವಿಶೇಷ.
ಕೇಂದ್ರ ಸರ್ಕಾರದ , ಪ್ರಮುಖ ನೀತಿ ಹಾಗೂ ಕಾರ್ಯ ಕ್ರಮಗಳನ್ನು ಭಾಷಣದಲ್ಲಿ ಪ್ರಕಟಿಸುವ ಸಾಧ್ಯತೆಗಳು ಇವೆ. ಈ ಹಿಂದೆ ಮನಮೋಹನ್ ಸಿಂಗ್ ಅವರು ಸತತ 10 ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಿದ್ದರು. ಈಗ 3ನೇ ಅವಧಿಯಲ್ಲಿ ಮೊದಲ ಬಾರಿಗೆ ಧ್ವಜಾರೋಹಣ ಮಾಡುವ ಮೂಲಕ ಪ್ರಧಾನಿ ಮಹತ್ವ ಪಡೆದಿದ್ದಾರೆ.
ದೇಶದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಅವರು 17 ಬಾರಿ ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 16 ಬಾರಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದರು.
- Advertisement -