Friday, May 3, 2024
spot_imgspot_img
spot_imgspot_img

ಹೋಮಕುಂಡದಲ್ಲಿ ಸುಟ್ಟ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್‌ನಲ್ಲಿ ಜಾಮೀನು.!? “ನ್ಯಾಯ ಎಲ್ಲಿದೆ..?; ಭಾಸ್ಕರ್ ಶೆಟ್ಟಿ ತಾಯಿ ಪ್ರಶ್ನೆ

- Advertisement -G L Acharya panikkar
- Advertisement -
astr

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪ್ರಕರಣ, ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಜಾಮೀನು ಮಂಜೂರಾಗಿದೆ.

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂರು ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಈ ಸಂಬಂಧ ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಮ್ಮ ದೇಶದಲ್ಲಿ ಹಣ ಇದ್ದವರಿಗೆ ಒಂದು ಕಾನೂನು, ಪಾಪದವರಿಗೆ ಇನ್ನೊಂದು ಕಾನೂನು.?” ಜೀವಾವಧಿ ಶಿಕ್ಷೆ ಪ್ರಕಟ ಆದವರಿಗೆ ಜಾಮೀನು ಹೇಗೆ ಸಿಕ್ಕಿದೆ..! ಎಂದು ಪ್ರಶ್ನೆ ಮಾಡಿದ್ದಾರೆ.

ತಾಯಿ ಗುಲಾಬಿ ಶೆಟ್ಟಿ

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿಯ ಗೆಳೆಯ ನಿರಂಜನ ಭಟ್ ಇವರಿಗೆ ಜೀವಿತಾವಧಿ ಶಿಕ್ಷೆ ಪ್ರಕಟವಾಗಿತ್ತು, ಉಡುಪಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ಮಹತ್ವದ ತೀರ್ಪು ಈ ಹಿಂದೆ ನೀಡಿತ್ತು. ಆದರೆ ಸದ್ಯ ಈ 3 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಇದು ಹೇಗೆ ಸಾಧ್ಯ ಎಂದು ಭಾಸ್ಕರ್ ಶೆಟ್ಟಿ ತಾಯಿ ಪ್ರಶ್ನೆಮಾಡಿದ್ದಾರೆ.

- Advertisement -

Related news

error: Content is protected !!