Saturday, June 28, 2025
spot_imgspot_img
spot_imgspot_img

ಭಯಾನಕ ಕೊಲೆ ಪ್ರಕರಣ: ದೇಹ ತುಂಡು ತುಂಡು ಮಾಡಿ ಮೋರಿಗೆ ಎಸೆದು ಕ್ರೌರ್ಯ

- Advertisement -
- Advertisement -

ಬೆಂಗಳೂರಿ‌ನಲ್ಲೊಂದು ಭಯಾನಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರನ್ನು ಆರೋಪಿ ಮನೆಯಲ್ಲೇ ತುಂಡುತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ್ದಲ್ಲದೆ, ಮೃತದೇಹದ ಭಾಗಗಳನ್ನು ಬೇರೆ ಬೇರೆ ಮೋರಿಗೆ ಎಸೆದು ಸಾಕ್ಷ್ಯ ನಾಶ ಮಾಡಲಾಗಿದೆ. ಮೃತದೇಹದ ಪತ್ತೆಗೆ ನುರಿತ ತಜ್ಞರನ್ನು ಕರೆಸಿಕೊಂಡರೂ ಉಪಯೋಗವಾಗಿಲ್ಲ. ಮೂರು ದಿನಗಳಿಂದ ಹುಡುಕಿದರೂ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ಎಸಗಲಾಗಿದೆ.

ಕೊಲೆಯಾದ ದುರ್ದೈವಿ ಕೆವಿ ಶ್ರೀಕಾಂತ್ (34) ಎಂಬುದು ತಿಳಿದುಬಂದಿದೆ. ಮಾಧವ ರಾವ್ ಎಂಬಾತನೇ ಕೊಲೆ ಆರೋಪಿಯಾಗಿದ್ದು, ಸಂಪಿಗೆಹಳ್ಳಿ ಪೊಲೀಸರು ಭಯಾನಕ ಕೊಲೆಯ ಕೃತ್ಯವನ್ನು ಬಯಲಿಗೆಳೆದಿದ್ದಾರೆ.

ಬಸವೇಶ್ವರ ನಗರದ ಮಾರ್ಗದರ್ಶಿ ಚಿಟ್ ಫಂಡ್‌ನಲ್ಲಿ ಡೆವಲಪ್ಟೆಂಟ್ ಆಫೀಸರ್ ಆಗಿದ್ದ ಕೆ.ವಿ.ಶ್ರೀನಾಥ್, ಥಣಿಸಂದ್ರದ ಅಂಜನಾದ್ರಿ ಲೇಔಟ್‌ನಲ್ಲಿ ವಾಸವಾಗಿದ್ದ. ಮೇ.28ರ ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೊರ ಹೋಗಿದ್ದ ಆತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಈ ಹಿನ್ನಲೆಯಲ್ಲಿ ಶ್ರೀನಾಥ್ ಪತ್ನಿ ಮೇ.29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಕೆ.ವಿ.ಶ್ರೀನಾಥ್ ಮೇ.28ರಂದು ಕೆ.ಆರ್.ಪುರಂನ ವಿಜಿನಪುರದಲ್ಲಿರೋ ಮಾಧವರಾವ್‌ ಮನೆಗೆ ಹೋಗಿರೋದು ತಿಳಿದು ಬಂದಿದ್ದು, ಸಿಸಿಟಿವಿಯಲ್ಲಿ ಮಾಧವರಾವ್ ಮನೆಗೆ ಶ್ರೀನಾಥ್ ಎಂಟ್ರಿ ಆಗಿರುವುದು ಸೆರೆಯಾಗಿದೆ.
ಆದರೆ ಕೆ.ವಿ.ಶ್ರೀನಾಥ್ ಮನೆಯಿಂದ ಹೊರಗೆ ಹೋಗುವುದು ರೆಕಾರ್ಡ್ ಆಗಿರಲಿಲ್ಲ. ಜೊತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದೆ. ಮಾಧವರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ. ಬಳಿಕ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಮಾಧವರಾವ್‌ನ್ನು ಪತ್ತೆ ಹಚ್ಚಿ ಬಂಧಿಸಿ ಕರೆ ತರಲಾಗಿದೆ. ಪೊಲೀಸರ ವಿಚಾರಣೆ ವೇಳೆ ಮಾಧವರಾವ್ ಅಸಲಿ ವಿಚಾರ ಬಾಯ್ದಿಟ್ಟಿದ್ದಾನೆ. ಎರಡು ವರ್ಷದಿಂದ ಮಾಧವರಾವ್‌ ಮತ್ತು ಕೆ.ವಿ.ಶ್ರೀನಾಥ್ ಪರಿಚಿತರಾಗಿದ್ದರು. ಶ್ರೀನಾಥ್ ಬಳಿ ಮಾಧವರಾವ್ 5 ಲಕ್ಷ ರೂಪಾಯಿ ಹಣದ ಚೀಟಿ ಹಾಕಿದ್ದ. ಈ ಚೀಟಿ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗುತ್ತಿತ್ತು. ಚೀಟಿ ಹಣ ವಾಪಸ್ ಕೊಡುವಂತೆ ಮಾಧವರಾವ್‌ಗೆ ಶ್ರೀನಾಥ್ ಒತ್ತಾಯ ಮಾಡುತ್ತಿದ್ದ. ಅಲ್ಲದೇ ಮಾಧವ್ ರಾವ್ ಪತ್ನಿ ಜೊತೆ ಕೆ.ವಿ.ಶ್ರೀನಾಥ್‌ಗೆ ಅಕ್ರಮ ಸಂಬಂಧ ಇತ್ತು ಎಂದು ಹೇಳಲಾಗಿದೆ.

ಹೀಗಿರುವಾಗ ಮೇ.28ರಂದು ಬೆಳಗ್ಗೆ ಮಾಧವರಾವ್ ಮನೆಗೆ ಕೆ.ವಿ.ಶ್ರೀನಾಥ್ ಬಂದಿದ್ದಾನೆ. ಇದೇ ವೇಳೆ ಇಬ್ಬರಿಗೂ ಹಣದ ವಿಚಾರದಲ್ಲಿ ಗಲಾಟೆ ಆಗಿದೆ. ಬಳಿಕ ಮಾಧವರಾವ್ ಮನೆಯಲ್ಲಿದ್ದ ಜಾಕ್ ರಾಡ್‌ನಿಂದ ಶ್ರೀನಾಥ್ ತಲೆಗೆ ಹೊಡೆದಿದ್ದು, ಶ್ರೀನಾಥ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಬಳಿಕ ಮಾಧವರಾವ್ ದೇಹವನ್ನು ಮಚ್ಚಿನಿಂದ ತುಂಡು ತುಂಡಾಗಿ ಕತ್ತರಿಸಿ, ಸಾಕ್ಷಿ ನಾಶ ಮಾಡಲು ಮೃತದೇಹವನ್ನು ಮೂರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದಾನೆ. ಬಳಿಕ 3 ಒಂದು ಬ್ಯಾಗ್ ಗಳಲ್ಲಿ ಮೃತದೇಹದ ತುಂಡುಗಳನ್ನು ಬೆಳತ್ತೂರು ಬಳಿಯ ಮೋರಿಯಲ್ಲಿ ಬಿಸಾಕಿದ್ದಾನೆ. ನಂತರ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿ ಮಾದವರಾವ್ ಆಂಧ್ರ ಪ್ರದೇಶಕ್ಕೆ ಎಸ್ಕೆಪ್ ಆಗಿದ್ದಾನೆ. ಸದ್ಯ ಈ ಪ್ರಕರಣ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಕಳೆದ ಮೂರು ದಿನದಿಂದ ಪೊಲೀಸರು ಶ್ರೀನಾಥ್ ಮೃತದೇಹದ ತುಂಡಗಳಿಗಾಗಿ ಹುಡುಕಾಡ ನಡೆಸುತ್ತಿದ್ದಾರೆ. ಮೃತದೇಹ ಹುಡುಕಲು ಮಂಗಳೂರಿನಿಂದ ತಜ್ಞರನ್ನು ಕರೆಸಲಾಗಿದೆ ಆದರೆ ಮೃತದೇಹದ ತುಂಡುಗಳು ಪತ್ತೆಯಾಗಿಲ್ಲ. ಮೋರಿಯಲ್ಲಿ ಮೃತದೇಹದ ತುಂಡುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರಬಹುದೆಂದು ಶಂಕಿಸಲಾಗಿದೆ.

- Advertisement -

Related news

error: Content is protected !!