- Advertisement -
- Advertisement -
ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬೆಂಗಳೂರು ರಸ್ತೆಯ ಧನಲಕ್ಷ್ಮಿ ಚಿತ್ರ ಮಂದಿರದ ಎದುರು ನಡೆದಿದೆ.
ಮಾಸ್ತಿಗೌಡ ಅಲಿಯಾಸ್ ಕೃಷ್ಣ (30) ಹತ್ಯೆಗೀಡಾದ ರೌಡಿಶೀಟರ್ ಆಗಿದ್ದು, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.
ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಕೃಷ್ಣನನ್ನು ಬೆನ್ನಟ್ಟಿದ್ದಾರೆ. ಆತ ಓಡಲು ಆರ೦ಭಿಸುತ್ತಿದ್ದಂತೆಯೇ ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಹೇಳಲಾಗಿದೆ. ತಲೆ ಸೇರಿದಂತೆ ದೇಹದ ವಿವಿಧ ಭಾಗಳಿಗೆ ಗಂಭೀರ ಗಾಯಗಳಾಗಿದ್ದು, ಮಾಸ್ತಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾನೆನ್ನಲಾಗಿದೆ.
- Advertisement -