Saturday, June 28, 2025
spot_imgspot_img
spot_imgspot_img

ಪುತ್ತೂರು: ಹಾಸ್ಟೆಲ್‌ನಿಂದ ತಪ್ಪಿಸಿಕೊಂಡು ರೈಲಿನಲ್ಲಿ ಬೆಂಗಳೂರಿಗೆ ಹೊರಟಿದ್ದ ಬಾಲಕರ ರಕ್ಷಣೆ

- Advertisement -
- Advertisement -

ಪುತ್ತೂರು: ಹಾಸ್ಟೆಲ್‌ನಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ತೆರಳಲೆಂದು ಪುತ್ತೂರು ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಬಾಲಕರನ್ನು ನಿಲ್ದಾಣದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಜು.13 ರಂದು ಟಿಕೆಟ್ ಕೌಂಟರ್ ಬಳಿ ಬಂದ ವಿದ್ಯಾರ್ಥಿಗಳು ಬೆಂಗಳೂರಿಗೆ ಹೊರಡುವ ರೈಲಿನ ಬಗ್ಗೆ ಮಾಹಿತಿ ಪಡೆದು ಟಿಕೆಟ್ ನೀಡುವಂತೆ ಕೇಳಿದ್ದಾರೆ. ಇವರ ವರ್ತನೆಯನ್ನು ಗಮನಿಸಿ ಸಂಶಯಗೊಂಡ ಸಿಬ್ಬಂದಿ ವಿದ್ಯಾರ್ಥಿಗಳನ್ನು ವಿಚಾರಿಸಿದಾಗ, ಅವರು ತಪ್ಪಿಸಿಕೊಂಡು ಬಂದಿರುವ ಸಂಗತಿ ತಿಳಿಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ಬಾಲಕರನ್ನು ವಿಚಾರಣೆ ನಡೆಸಿ ಅವರ ಮನವೊಲಿಸಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಬಾಲಕರು ಪೋಷಕರ ಜತೆಯಲ್ಲಿದ್ದು, ಪ್ರಕರಣ ಸುಖಾಂತ್ಯಗೊಂಡಿದೆ.

- Advertisement -

Related news

error: Content is protected !!