Wednesday, May 22, 2024
spot_imgspot_img
spot_imgspot_img

ಭೀಕರ ರಸ್ತೆ ಅಪಘಾತ; ಕರ್ತವ್ಯ ನಿರತ ಪಿಎಸ್‌ಐ ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಹುಬ್ಬಳ್ಳಿ: ಕಾರು ಬ್ರಿಡ್ಜ್‌ಗೆ ಗುದ್ದಿದ್ದ ಪರಿಣಾಮ ಕರ್ತವ್ಯ ನಿರತ ಪಿಎಸ್‌ಐ ಸಾವನ್ನಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ಗ್ರಾಮದ ಬಳಿ ನಡೆದಿದೆ.

ನಿಯಂತ್ರಣ ತಪ್ಪಿ ಕಾರು ಬ್ರಿಡ್ಜ್‌ಗೆ ಗುದ್ದಿದ್ದ ಪರಿಣಾಮ ಅಪಘಾತ ಸಂಭವಿಸಿದ್ದು, ಕರ್ತವ್ಯ ನಿರತ ಪಿಎಸ್‌ಐ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ಗ್ರಾಮದ ಬಳಿ ನಡೆದಿದೆ. ಅಮ್ಮಿನಗಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಮಲ್ಲಿಕಾರ್ಜುನ ಕುಲಕರ್ಣಿ ಅಪಘಾತದಲ್ಲಿ ಸಾವನ್ನಪ್ಪಿದವರಾಗಿದ್ದಾರೆ.

ಮೂಲತಃ ನವಲಗುಂದ ತಾಲೂಕಿನ ಕುಮಾರಗೊಪ್ಪ ಗ್ರಾಮದ ನಿವಾಸಿಯಾದ ಇವರು ನಿಯಂತ್ರಣ ತಪ್ಪಿದ ಕಾರಣ ಕಾರು ಬ್ರಿಡ್ಜ್‌ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಪಿಎಸ್‌ಐ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ನವಲಗುಂದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!