Monday, June 30, 2025
spot_imgspot_img
spot_imgspot_img

ಪಾರ್ಟಿಗೆ ಕಾಡು ಪ್ರಾಣಿಗಳ ಬೇಟೆ; ಮೂವರು ಆರೋಪಿಗಳ ಬಂಧನ..!

- Advertisement -
- Advertisement -

ನೆಲಮಂಗಲ: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಅರಣ್ಯಾಧಿಕಾರಿಗಳ ವಿಶೇಷ ಕಾರ್ಯಚರಣೆ ಮಾಡಿ ನೆಲಮಂಗಲದಆರೋಪಿಗಳನ್ನು ಬಂಧಿಸಲಾಗದೆ.

ಬಂಧಿತರನ್ನು ಶಾರ್ಪ್ ಶೂಟರ್​​ ಶ್ರೀನಿವಾಸ್(46), ಹನುಮಂತರಾಜು (44), ಮತ್ತು ರಾಮನಗರದ ಮುನಿರಾಜು(38) ಎಂದು ಗುರುತಿಸಲಾಗಿದೆ.

ಅರಣ್ಯಾಧಿಕಾರಿಗಳನ್ನು ಕಂಡು ಥಾರ್ ಜೀಪ್​​ನಲ್ಲಿ ಆರೋಪಿಗಳು ಪರಾರಿಯಾಗುತ್ತಿದ್ದರು. 6 ಕಿ. ಮೀ ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಆರೋಪಿಗಳನ್ನು ರಾಮನಗರ ಜಿಲ್ಲೆಯ ಚಿಕ್ಕಕುಂಟನಹಳ್ಳಿ ಕ್ರಾಸ್ ಬಳಿ ಬಂಧಿಸಲಾಗಿದೆ. ಬಂಧಿತರಿಂದ 2 ಜಿಂಕೆ, 2 ಕಾಡು ಹಂದಿ, 1 ಗನ್, ಏರ್ ಗನ್, 11 ಜೀವಂತ ಗುಂಡು, 2 ಚಾಕು, ಕೊಡಲಿ, ಮಚ್ಚು, 3 ಮೊಬೈಲ್ ಜಪ್ತಿ ಮಾಡಲಾಗಿದೆ. ಹೈ ಫ್ಲ್ಯಾಶ್ ಲೈಟ್‍ಗಳನ್ನ ಬಳಸಿ ಆರೋಪಿಗಳು ಬೇಟೆಯಾಡುತ್ತಿದ್ದರು. ಎರಡು ತಿಂಗಳ ಸತತ ಪ್ರಯತ್ನದಿಂದ ಆರೋಪಿಗಳು ಬಲೆಗೆ ಬಿದಿದ್ದಾರೆ.

ಬೆಂಗಳೂರು ಅರಣ್ಯ ಸಂಚಾರಿ ದಳದ ಡಿಸಿಎಫ್ ಸುನಿತಾ ಬಾಯಿ, ಎಸಿಎಫ್ ಸರಿತಾ ಮಾರ್ಗದರ್ಶನ, ಆರ್​ಎಫ್ಒ ರಮೇಶ್, ಸಿದ್ದರಾಜು, ಅಮೃತ್ ದೇಸಾಯಿ, ರಾಜು, ಆಶಾ, ಚೇಸಿಂಗ್ ಮಾಡಿದ ಚಾಲಕ ಸುರೇಶ್​ ನೇತೃತ್ವದ ತಂಡದ ವಿಶೇಷ ಕಾರ್ಯಚರಣೆ ಮೂಲಕ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

- Advertisement -

Related news

error: Content is protected !!