Saturday, June 28, 2025
spot_imgspot_img
spot_imgspot_img

ಪ್ರೇಮವೈಫಲ್ಯದಿಂದ ಮನನೊಂದ ಯುವತಿ ನದಿಗೆ ಹಾರಿ ಆತ್ಮಹತ್ಯೆ..!!

- Advertisement -
- Advertisement -

ಪ್ರೇಮವೈಫಲ್ಯದಿಂದ ಮನನೊಂದ ಯುವತಿಯೋರ್ವಳುನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಧರ್ಮಾವರಂನ ನಿಹಾರಿಕಾ (22) ಮೃತ ಯುವತಿ.

ಬೆಂಗಳೂರಿನಲ್ಲಿ B-Tech ಓದುತ್ತಿದ್ದ ನಿಹಾರಿಕಾ ಪಿಜಿಯಲ್ಲಿ ವಾಸವಿದ್ದಳು. ಆಂಧ್ರಪ್ರದೇಶದ ತೆನಾಲಿ ಮೂಲದ ಅಜಯ್‌ ಎಂಬಾತನನ್ನ ಪ್ರೀತಿಸುತ್ತಿದ್ದಳು. ಈ ನಡುವೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಬ್ರೇಕಪ್‌ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇದೇ ತಿಂಗಳ 23 ರಂದು ಕೆಎಸ್ಆರ್‌ಟಿಸಿ ಬಸ್ ಮೂಲಕ ಬೆಂಗಳೂರಿನಿಂದ ಧರ್ಮಾವರಂಗೆ ಬರುತ್ತಿದ್ದ ನಿಹಾರಿಕಾ ಬಸ್ ನಲ್ಲಿ ಬರುವಾಗಲೇ ಪ್ರಿಯಕರನ ಜೊತೆ ಮೊಬೈಲ್‌ನಲ್ಲಿ ಮಾತನಾಡುತ್ತಾ ಜಗಳ ಮಾಡಿಕೊಂಡಿದ್ದಾಳೆ. ನಂತರ ಈ ವಿಚಾರವನ್ನು ಸ್ನೇಹಿತರು ಹಾಗೂ ತನ್ನ ತಂಗಿಗೆ ಕರೆ ಮಾಡಿ ತಿಳಿಸಿದ್ದಾಳೆ. ಬಳಿಕ ಬಸ್‌ ನಿಲ್ದಾಣದಲ್ಲಿ ಇಳಿದವಳೇ ಸೀದಾ ಸೇತುವೆ ಮೇಲೆ ಹೋಗಿ ಚಿತ್ರಾವತಿ ನದಿಗೆ ಹಾರಿದ್ದಾಳೆ. ಸಾಯುವುದಕ್ಕೂ ಮುನ್ನ ಆ ಸ್ಥಳದ ಫೋಟೋ ಹಾಗೂ ಲೋಕೇಶನ್ ಶೇರ್ ಮಾಡಿದ್ದಾಳೆ.

ಮಗಳ ಸಾವಿಗೆ ಪ್ರಿಯಕರ ಅಜಯ್ ಕಾರಣ ಅಂತಾ ಮೃತ ನಿಹಾರಿಕಾಳ ಪೋಷಕರು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನದಿಗೆ ಹಾರಿದ ಎರಡು ದಿನಗಳ ನಂತರ ಯುವತಿ ಮೃತದೇಹ ಪತ್ತೆಯಾಗಿದೆ.

- Advertisement -

Related news

error: Content is protected !!