Thursday, May 2, 2024
spot_imgspot_img
spot_imgspot_img

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಬಂಧನ

- Advertisement -G L Acharya panikkar
- Advertisement -

ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ಕೋಟೆ ಬಾಗಿಲು ಎಂಬಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು ಕಣ್ಣಿಗೆ ಕೂಡ ಕೋಲಿನಿಂದ ಹೊಡೆದು ಎಡ ಭಾಗದ ಕಣ್ಣಿಗೆ ಪೆಟ್ಟಾಗಿದೆ ಎನ್ನಲಾಗಿದೆ.

ಇನ್ನು ಮಗಳಿಗೆ ತಲೆಯಭಾಗಕ್ಕೆ ಹೊಡೆದಿದ್ದು ಪ್ರಾಣ ಭಯದಿಂದ ಇಬ್ಬರು ತಪ್ಪಿಸಿಕೊಂಡು ನೆರೆ ಹೊರೆಯವರ ಬಳಿ ಬಂದು ಸಹಾಯ ಕೇಳಿದ್ದಾರೆ ತಕ್ಷಣ ಸ್ಪಂದಿಸಿದ ಸ್ಥಳೀಯರು ಆಂಬ್ಯುಲೆನ್ಸ್‌ ಸಹಾಯದಿಂದ ಉಜಿರೆ ಆಸ್ಪತ್ರೆಗೆ ತಾಯಿ ಮತ್ತು ಮಗಳನ್ನು ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 108/2023 ಕಲಂ: 323,324,326,504,506 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ,

ಪ್ರಕರಣದ ಆರೋಪಿಯ ಪತ್ತೆಗಾಗಿ ತಕ್ಷಣ ಕಾರ್ಯಪ್ರವೃತ್ತರಾದ ಧರ್ಮಸ್ಥಳ ಪೊಲೀಸ್ ಠಾಣಾ ಪಿ.ಎಸ್.ಐ ಶ್ರೀ ಅನೀಲ್ ಕುಮಾರ್.ಡಿ, ಪಿ,ಎಸ್,ಐ ಸಮರ್ಥ ರವೀಂದ್ರ ಗಾಣಿಗೇರ ಮತ್ತು ಸಿಬ್ಬಂದಿಗಳಾದ ಹೆಚ್.ಸಿ ಶಶಿಧರ , ಪಿ.ಸಿ ಮಲ್ಲಿಕಾರ್ಜುನ ರವರುಗಳ ತಂಡವು, ಬೆಳ್ತಂಗಡಿ ಶಿಶಿಲ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

- Advertisement -

Related news

error: Content is protected !!