Saturday, June 28, 2025
spot_imgspot_img
spot_imgspot_img

ಪತಿ-ಪತ್ನಿಯ ಜಗಳ; ಕೊಲೆಯಲ್ಲಿ ಅಂತ್ಯ..!

- Advertisement -
- Advertisement -

ಪತಿ-ಪತ್ನಿ ಜಗಳದಲ್ಲಿ ಪತ್ನಿಯನ್ನು ಕೊಲೆ ಮಾಡಿದ ಘಟನೆ ಹೂವಿನಹಡಗಲಿ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆ ಡಿಂಪಲ್ (28) ಹಾಗೂ ಹತ್ಯೆಮಾಡಿದ ವ್ಯಕ್ತಿ ಶ್ರೀಕಾಂತ್ ಪತಿ ಎಂದು ಗುರುತಿಸಲಾಗಿದೆ.

ಇವರು ಉಲವತ್ತು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯಾಧಿಕಾರಿಯಾಗಿದ್ದರು. ಶ್ರೀಕಾಂತ್ ನೆಲ್ಲುಕುದರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಯಾಗಿದ್ದ. ಇಬ್ಬರು ಪ್ರೀತಿಸಿ ಮದುವೆ ಆಗಿದ್ದು, ಆದರೆ ಇವರಿಬ್ಬರ ಸಂಸಾರ ಇತ್ತೀಚೆಗೆ ಸರಿ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಅಂತೆಯೇ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಕುಪಿತನಾದ ಗಂಡ ಶ್ರೀಕಾಂತ್, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಇದೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಇಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!