Monday, May 20, 2024
spot_imgspot_img
spot_imgspot_img

ಪತಿ ಅಕ್ರಮ ಸಂಬಂಧ; ಆತ್ಮಹತ್ಯೆಗೆ ಶರಣಾದ ಪತ್ನಿ..!

- Advertisement -G L Acharya panikkar
- Advertisement -

ಗೃಹಿಣಿಯೊಬ್ಬರಯ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಕಾವ್ಯ ಎಂದು ಗುರುತಿಸಲಾಗಿದೆ.

ಮಗಳು ನೇಣಿಗೆ ಶರಣಾಗಲು ಪತಿಯ ಅಕ್ರಮ ಸಂಬಂಧವೇ ಕಾರಣ ಎಂದು ಕಾವ್ಯ ಪೋಷಕರು ಆರೋಪಿಸಿದ್ದಾರೆ. ಪತಿ ಪ್ರವೀಣ್ ಸೇರಿ ನಾಲ್ವರ ವಿರುದ್ಧ ದೂರು ನೀಡಿರುವ ಪೋಷಕರು ಅಳಿಯನನ್ನ ನಮಗೆ ಒಪ್ಪಿಸುವಂತೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಎರಡು ವರ್ಷದ ಹಿಂದೆ ಅರ್ಧಕೆಜಿ ಚಿನ್ನಕೊಟ್ಟು, 50 ಲಕ್ಷ ಖರ್ಚು ಮಾಡಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದೆವು. ಇತ್ತಿಚೇಗೆ ಮೊಮ್ಮಗನ ಹುಟ್ಟುಹಬ್ಬ ನಡೆದಿತ್ತು.

ಮೃತ ಕಾವ್ಯಳ ಪತಿ ಪ್ರವೀಣ್, ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದ. ಆದರೆ ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಆದರೆ ಅಳಿಯನ ಜೊತೆ ಹುಡುಗಿಯೊಬ್ಬಳ ಅಕ್ರಮ ಸಂಬಂಧವಿತ್ತು. ಹೆಂಡತಿ, ಮಗುವಿಗಿಂತ ಅವಳೇ ಅಳಿಯನಿಗೆ ಹೆಚ್ಚಾಗಿದ್ದಳು. ಈ ಬಗ್ಗೆ ಪ್ರಶ್ನೆ ಮಾಡಿದರೆ ತಂಗಿ ಎಂದು ಹೇಳಿದ್ದ. ಕುಟುಂಬಸ್ಥರೇ ಮೃತದೇಹವನ್ನು ಕೆಳಗಿಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಕಾವ್ಯಳ ಪತಿ, ಅತ್ತೆ, ಮಾವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಜೀಪ್ ಹತ್ತುತ್ತಿದ್ದ ವೇಳೆ, ಕಾವ್ಯಳ ಪತಿ, ಅತ್ತೆ, ಮಾವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.

- Advertisement -

Related news

error: Content is protected !!