Saturday, June 28, 2025
spot_imgspot_img
spot_imgspot_img

ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ, ನ್ಯಾಯವು ಮೇಲುಗೈ ಸಾಧಿಸಲಿ- ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ದರ್ಶನ್‌ ಪತ್ನಿಯಿಂದ ಮೊದಲ ಪ್ರತಿಕ್ರಿಯೆ

- Advertisement -
- Advertisement -

ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಅರೆಸ್ಟ್ ಆಗಿದ್ದು, ಇದೀಗ ರೇಣುಕಾಸ್ವಾಮಿ ಕೊಲೆಗೆ ದರ್ಶನ್ ಪತ್ನಿಯಿಂದ ಮೊದಲ ರಿಯಾಕ್ಷನ್ ಕೊಟ್ಟಿದ್ದಾರೆ. ರೇಣುಕಾಸ್ವಾಮಿ ನಿಧನಕ್ಕೆ ವಿಜಯಲಕ್ಷ್ಮಿ ಸಂತಾಪ ಸೂಚಿಸಿದ್ದಾರೆ.

ದರ್ಶನ್ ಅರೆಸ್ಟ್ ಆದ ಬಳಿಕ ವಿಜಯಲಕ್ಷ್ಮಿ ಸೈಲೆಂಟ್ ಆಗಿದ್ದರು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ಹೇಳಿಕೆ ಕೂಡ ಪೊಲೀಸರು ಪಡೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿ, ಮೃತ ರೇಣುಕಾಸ್ವಾಮಿಗೆ ಸಂತಾಪವನ್ನು ಸೂಚಿಸುತ್ತೇನೆ. ನನ್ನ ಮಗ ಹಾಗೂ ಕುಟುಂಬಕ್ಕೆ ದುಃಖ ತಂದಿದೆ.

ನನ್ನ ಹಾಗೂ ನನ್ನ ಮಗನ ವಿರುದ್ಧ ಸುಳ್ಳು ಮಾಹಿತಿ ಹಾಗೂ ಅಸತ್ಯಗಳನ್ನ ಸಾಮಾಜಿಕ ಜಾಲಾತಾಣದಲ್ಲಿ ಹಾಕುವುದನ್ನು ತಡೆಯಬೇಕಾಗಿದೆ. ಅಧಿಕೃತ ಪ್ರಕಟಣೆಯನ್ನು ಮಾತ್ರ ಪ್ರಕಟಿಸುವಂತೆ ನಾನು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ. ತಾಯಿ ಚಾಮುಂಡೇಶ್ವರಿ ಹಾಗೂ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಮೇಲುಗೈ ಸಾಧಿಸಲಿ. ‘ಸತ್ಯಮೇವ ಜಯತೆ’ ಎಂದು ದರ್ಶನ್ ಪತ್ನಿ ಬರೆದುಕೊಂಡಿದ್ದಾರೆ.

- Advertisement -

Related news

error: Content is protected !!