- Advertisement -
- Advertisement -
ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಬಂಧಿಸಿದ 4 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ತುರ್ತು ವರದಿ ನೀಡುವಂತೆ ಸರಕಾರ ಆದೇಶಿದೆ.
ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ, ಜಿಲ್ಲಾಧಿಕಾರಿಗಳ ನಿವಾಸದಲ್ಲಿ 50 ಲಕ್ಷ ವೆಚ್ಚದಲ್ಲಿ ಅನಧಿಕೃತವಾಗಿ ಸ್ವಿಮ್ಮಿಂಗ್ ಪೂಲ್, ಕರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟಿರುವುದು, ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದಲ್ಲಿ ನಿರ್ಲಕ್ಷ್ಯ ವಿಚಾರದಲ್ಲಿ ತನಿಖೆ ನಡೆಸಿ 30 ದಿನಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ.
ಈ ಬಗ್ಗೆ ತನಿಖೆ ನಡೆಸಲು ಅಧೀನ ಕಾರ್ಯದರ್ಶಿ ಜಯರಾಂ ಅವರನ್ನು ಸರ್ಕಾರ ನೇಮಕ ಮಾಡಿದೆ.
- Advertisement -