- Advertisement -
- Advertisement -
ವಶಕ್ಕೆ ಪಡೆದ ಮೂವರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಿದ ಪೊಲೀಸರು
ಇಡ್ಕಿದು: ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ ಸೇವನೆ ಮಾಡುತ್ತಿದ್ದರು ಎಂದು ಸಾರ್ವಜನಿಕರ ದೂರಿನ ಮೇಲೆ 3 ಜನ ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ನಡೆದಿತ್ತು.
ವಶಕ್ಕೆ ಪಡೆದ ಮೂವರಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದು ವಿಚಾರಣೆ ವೇಳೆ ಇವರು ಗಾಂಜಾ ಸೇವನೆ ಮಾಡಿರುವುದಿಲ್ಲ ಎಂದು ತಿಳಿದು ಬಂದಿದೆ.
ನಮ್ಮ ಮನೆಯ ಮಕ್ಕಳು ಗಾಂಜಾ ಸೇವನೆ ಮಾಡಿರುವುದಿಲ್ಲ. ಸಾರ್ವಜನಿಕರ ದೂರಿನ ಮೇರೆಗೆ ಪೊಲೀಸರು ವಿಚಾರಣೆ ಮಾಡಿ ಬಿಟ್ಟು ಕಳಿಸಿದ್ದಾರೆ ಎಂದು ವಿದ್ಯಾರ್ಥಿಗಳ ಪೋಷಕರು ತಿಳಿಸಿದ್ದಾರೆ.
ಈ ಪ್ರಕರಣದ ಪ್ರಮುಖ ಆರೋಪಿ ಸಾಹಿಲ್ ಎಂಬಾತನ ತನಿಖೆ ಮುಂದುವರೆಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.
- Advertisement -