ಕಾದು ಕುಳಿತು ಪೊಲೀಸರಿಗೆ ಹಿಡಿದು ಕೊಟ್ಟ ಗ್ರಾಮಸ್ಥರು
ಇಡ್ಕಿದು: ಕೆಲ ದಿನಗಳಿಂದ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ಹದಿಹರೆಯದ ಯುವಕರ ತಂಡ ಯಾರೂ ಇಲ್ಲದ ನಿರ್ಜನ ಪ್ರದೇಶಕ್ಕೆ ಬಂದು ಗಾಂಜಾ ಮತ್ತು ಮಾದಕ ವಸ್ತುವನ್ನು ಸೇವಿಸುತ್ತಿದ್ದರು ಎಂಬ ಮಾಹಿತಿಯೊಂದು ಊರವರಿಗೆ ದೊರೆತಿದೆ.
ಅಲ್ಲದೇ ನಶೆಯಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎಂಬ ಮಾಹಿತಿ ಗ್ರಾಮಸ್ಥರಿಗೆ ತಿಳಿಸಿದ್ದರು. ಮಾಹಿತಿ ತಿಳಿದ ಗ್ರಾಮಸ್ಥರು ಕಾದು ಕುಳಿತಿದ್ದರು.
ಅದೇ ಸಮಯಕ್ಕೆ ಬಂದ ಯುವಕರು ಇನ್ನೇನು ತಮ್ಮ ಕೆಲಸ ಮಾಡಬೇಕೆನ್ನುವಷ್ಟರಲ್ಲಿ ಅವರನ್ನು ಹಿಡಿದು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಕಂಬಳಬೆಟ್ಟು ನೂಜಿ ನಿವಾಸಿಗಳಾದ ಸಾಹಿಲ್ ಮತ್ತು ಇಬ್ಬರು ಎನ್ನಲಾಗಿದೆ. ಆರೋಪಿಗಳಿಂದ 1ಬೈಕ್ ಹಾಗೂ 1ಸ್ಕೂಟರ್ನ್ನು ವಶಕ್ಕೆ ಪಡೆಯಲಾಗಿದೆ.
ಈ ಮೊದಲು 3ಜನರಲ್ಲೊಬ್ಬ ನೆಲ್ಲಿಗುಡ್ಡೆ ಎಂಬಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ವಿಚಾರದಲ್ಲಿ ಸ್ಥಳೀಯರಿಂದ ಗೂಸಾ ತಿಂದಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಸಣ್ಣ ವಯಸ್ಸಿನಲ್ಲೇ ಮಾದಕ ವ್ಯಸನಕ್ಕೆ ಒಳಗಾಗಿ ಮಹಿಳೆಯರಿಗೆ ಕಿರುಕುಳ ನೀಡುವ ಇಂತಹ ಸಮಾಜ ದ್ರೋಹಿಗಳನ್ನು ಇನ್ನಾದರೂ ಪೊಲೀಸರು ಜಾಡಿಸಿ ಬುದ್ದಿ ಕಲಿಸಬೇಕೆಂಬುವುದು ಗ್ರಾಮಸ್ಥರ ಆಶಯ.