Wednesday, July 2, 2025
spot_imgspot_img
spot_imgspot_img

*ಗೋ ಹತ್ಯೆಗೆ ಪ್ರಚೋದನೆ ನೀಡಿದರೆ ಸಿದ್ದರಾಮಯ್ಯ ಜೈಲಿಗೆ !*

- Advertisement -
- Advertisement -

ಕೊಪ್ಪಳ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಗೋ ಹತ್ಯೆಗೆ ಪ್ರಚೋದನೆ ನೀಡಿದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನೇ ಜೈಲಿಗೆ ಹಾಕುತ್ತೇವೆ ಎಂದು ಪಶು ಪಾಲನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಎಚ್ಚರಿಸಿದ್ದಾರೆ.


ಗೋ ಹತ್ಯೆ ನಿಷೇಧ ಬಳಿಕವೂ ಸಿದ್ದರಾಮಯ್ಯ ಅವರು ಗೋ ಮಾಂಸ ತಿನ್ನುವೆ ಎಂದೆನ್ನುತ್ತಿದ್ದಾರೆ. ಹೀಗೆ ಗೋಹತ್ಯೆಗೆ ಪ್ರಚೋದನೆ ನೀಡಿದರೆ ಅವರನ್ನೂ ಜೈಲಿಗೆ ತಳ್ಳುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದ್ದಾರೆ.


ಕೊಪ್ಪಳದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿದ್ದೇವೆ. ಗೋವುಗಳನ್ನು ನಾವು ಮಾತೆ ಎಂದು ಪೂಜೆ ಮಾಡುತ್ತೇವೆ. ಅವುಗಳನ್ನು ಹತ್ಯೆ ಮಾಡಿ ತಿನ್ನುವುದು ಮಹಾ ಅಪರಾಧ. ಸಿದ್ದರಾಮಯ್ಯ ಅವರೂ ಗೋವುಗಳನ್ನು ಮಾತೆ ಎಂದು ಪೂಜೆ ಮಾಡ್ತಾರೆ. ಆದರೆ ಗೋ ಮಾಂಸ ತಿನ್ನುತ್ತೇವೆ ಎನ್ನುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಮುಂದಿನ ದಿನದಲ್ಲಿ ಗೋ ಹತ್ಯೆಗೆ ಪ್ರಚೋದನೆ ನೀಡುವವರ ಮೇಲೆ ಕ್ರಮ ಕೈಗೊಳ್ಳುವ ಕಾಯ್ದೆ ತರುವಂತೆಯೂ‌ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇದು ಉತ್ತಮ ಸಲಹೆ ಎಂದು ಚವ್ಹಾಣ್ ಹೇಳಿದರು.

- Advertisement -

Related news

error: Content is protected !!