Saturday, June 28, 2025
spot_imgspot_img
spot_imgspot_img

ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಪ್ರಕರಣ; ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ

- Advertisement -
- Advertisement -

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಪ್ರಕರಣವನ್ನು ರದ್ದು ಕೋರಿ ಬಿಜೆಪಿ ನಾಯಕ ಆರ್.ಅಶೋಕ್ ಹೈಕೋರ್ಟ್​ಗೆ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್, ಅಶೋಕ್​ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ, ಪ್ರಕರಣದ ತನಿಖೆ ನಡೆಸಲು 2018ರಲ್ಲಿ ಆದೇಶ ನೀಡಿತ್ತು.

ಬಳಿಕ ಇದನ್ನು ಪ್ರಶ್ನಿಸಿ ಅಶೋಕ್​ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್‌ 22ಕ್ಕೆ ಮುಂದೂಡಿದೆ.

ಆರ್.ಅಶೋಕ್ ಅವರು ಈ ಹಿಂದೆ ಬೆಂಗಳೂರು ಉತ್ತರ ತಾಲ್ಲೂಕು ಬಗರ್‌ಹುಕುಂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದರು. ಆ ವೇಳೆ ಸೋಮನಹಳ್ಳಿಯಲ್ಲಿ 8 ಎಕರೆ ಭೂಮಿಯನ್ನು ಅಕ್ರಮ ಮಂಜೂರಾತಿ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಶೋಕ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು.

- Advertisement -

Related news

error: Content is protected !!