Saturday, June 28, 2025
spot_imgspot_img
spot_imgspot_img

ನೆಲ್ಯಾಡಿ: ಅಕ್ರಮ ಮರ ಸಾಗಾಟ: ಲಾರಿ ಚಾಲಕನನ್ನು ಬಂಧಿಸಿದ ಅರಣ್ಯಾಧಿಕಾರಿಗಳು

- Advertisement -
- Advertisement -

ನೆಲ್ಯಾಡಿ: ಯಾವುದೇ ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಸಮೀಪದ ಮಠದಲ್ಲಿ ಪತ್ತೆಹಚ್ಚಿರುವ ಅರಣ್ಯ ಇಲಾಖಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ ಲಾರಿ ಸಹಿತ ಮರದ ದಿಮ್ಮಿ ವಶಪಡಿಸಿಕೊಂಡ ಘಟನೆ ನಡೆದಿದೆ.

ಸುಳ್ಯ ತಾಲೂಕು ಅಲೆಟ್ಟಿ ನಿವಾಸಿ ನಿಖಿಲ್ ಸಂಗಮ್ (26ವ.) ಬಂಧಿತ ಲಾರಿ ಚಾಲಕ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಲಾರಿಯಲ್ಲಿ ಯಾವುದೇ ಪರವಾನಿಗೆ ಪಡೆಯದೆ ಮಂಗಳೂರಿನತ್ತ ಮರದ ದಿಮ್ಮಿ ಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಇದೀಗ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಉಪ್ಪಿನಂಗಡಿ ಅರಣ್ಯ ಇಲಾಖಾಧಿಕಾರಿಗಳ ತಂಡ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಆರ್‌ಎಫ್‌ಒ ಜಯಪ್ರಕಾಶ್ ಕೆ.ಕೆ., ಡಿಆರ್‌ಎಫ್‌ಒ ಭವಾನಿಶಂಕರ್, ಫಾರೆಸ್ಟರ್ ವಿನಯ್‌ಚಂದ್ರ ತೇಜಕುಮಾರ್ ಹಾಗೂ ಚಾಲಕ ಕಿಶೋರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ವರದಿಯಾಗಿದೆ.

- Advertisement -

Related news

error: Content is protected !!