- Advertisement -
- Advertisement -
ಸುಳ್ಯ: ಪಯಸ್ವಿನಿ ನದಿಯಿಂದ ಮರಳನ್ನು ಟಿಪ್ಪರ್ ಲಾರಿಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದು ಟಿಪ್ಪರ್ ಸಹಿತ ಮರಳನ್ನು ಸ್ವಾಧೀನಪಡಿಸಿಕೊಂಡ ಘಟನೆ ಅರಂತೋಡು ಗ್ರಾಮದ ಎಳ್ಳಕಜೆಯಲ್ಲಿ ನಡೆದಿದೆ.
ಬಂಧತ ಆರೋಪಿಯನ್ನು ಅರಂತೋಡು ಗ್ರಾಮದ ಪ್ರಶಾಂತ್ (38) ಪರಾರಿಯಾದವನು ತರುಣ್ ಎಂದು ಗುರುತಿಸಲಾಗಿದೆ.
ಟಿಪ್ಪರ್ ಲಾರಿಯಲ್ಲಿ ಕುಳಿತಿದ್ದ ವ್ಯಕ್ತಿಗಳಿಬ್ಬರು ಪೊಲೀಸರನ್ನು ನೋಡಿ ಪರಾರಿಯಾಗಲು ಯತ್ನಿಸಿದಾಗ ಓರ್ವನನ್ನು ಹಿಡಿಯಲು ಪೊಲೀಸರು ಯಶಸ್ವಿಯಾದರು. ಇನ್ನೋರ್ವ ಪರಾಗಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -