Tuesday, May 7, 2024
spot_imgspot_img
spot_imgspot_img

ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ; ಯುವಕನ ಬರ್ಬರ ಹತ್ಯೆ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರದೀಪ್(27) ಕೊಲೆಯಾದ ಯುವಕ. ಈತ ಮಹಿಳೆಯೋರ್ವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಈ ವಿಷಯ ಮಹಿಳೆಯ ಗಂಡನಿಗೆ ತಿಳಿದಿದ್ದು, ಬಳಿಕ ಇದೇ ವಿಚಾರವಾಗಿ ಪೊಲೀಸರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ಮಾಡಲಾಗಿತ್ತು. ಬುದ್ಧಿವಾದ ಹೇಳಿದ ನಂತರವೂ ಇಬ್ಬರ ಅಕ್ರಮ ಸಂಬಂಧ ಮುಂದುವರಿಸಿದ್ದರು. ಇದೇ ಸಿಟ್ಟಿನಿಂದ ಪ್ರದೀಪ್​ನನ್ನು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಮೇ 25 ತಡರಾತ್ರಿ ಮಾತುಕತೆ ನಡೆಸುವುದಕ್ಕೆ ಕರೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಿಳೆ ಪತಿ ವೆಂಕಟೇಶ್ ಹಾಗೂ ಕೋಳಿ ನಾಗೇಶ್​ ಕೊಲೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಬಳಿಕ ರಕ್ತದ ಮಡುವಿನಲ್ಲೇ ಯುವಕ ಪ್ರದೀಪ್ ಒಂದು ಕಿಲೋ ಮೀಟರ್ ವರೆಗೂ ಓಡಿ ಹೋಗಿದ್ದಾನೆ. ಆದರೂ ಬಿಡದೇ ಆತನನ್ನು ಹಿಂಬಾಲಿಸಿ ಅಟ್ಟಾಡಿಸಿಕೊಂಡು ಹೋಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಕೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!