Wednesday, May 1, 2024
spot_imgspot_img
spot_imgspot_img

ಅನಾರೋಗ್ಯದ ಹಿನ್ನೆಲೆ ಆರು ತಿಂಗಳ ಗರ್ಭಿಣಿ ಮೃತ್ಯು..!

- Advertisement -G L Acharya panikkar
- Advertisement -

ಬಂಟ್ವಾಳ: ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಎಂದು ಗುರುತಿಸಲಾಗಿದೆ.

ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸುಮಾರು10 ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ಕಾಲ ಮಕ್ಕಳಾಗಿರಲಿಲ್ಲ, ಪ್ರಸ್ತುತ ಚೊಚ್ಚಲ ಗರ್ಭಿಣಿಯಾಗಿದ್ದರು. ಹಲವು ವರ್ಷಗಳ ಕಾಲ ಸರಪಾಡಿ ಗ್ರಾಮ ಕರಣಿಕರ ಕಚೇರಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ, ಅವರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು. ಏಕಾಏಕಿ ಆರೋಗ್ಯ ಏರುಪೇರಾಗಿ ಸಾವನ್ನಪ್ಪಿದಾರೆ.

- Advertisement -

Related news

error: Content is protected !!