- Advertisement -
- Advertisement -



ಪುತ್ತೂರು : ರಾಜ್ಯ ಸರಕಾರ ಹಾಲಿನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇದರ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಜಯಶ್ರೀ (ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ, ಯಶಸ್ವಿನಿ ಶಾಸ್ತ್ರಿ ಬಿಜೆಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ, ಇವರ ನೇತೃತ್ವದಲ್ಲಿ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ವಿದ್ಯಾಗೌರಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ, ಜಯಶ್ರೀ ಎಸ್ ಶೆಟ್ಟಿ ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ, ಮೀನಾಕ್ಷಿ ಮಂಜುನಾಥ್ ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷೆ, ಯಶೋಧ ಕೆ ಗೌಡ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ನಗರ ಸಭಾ ಸದಸ್ಯೆ ಗೌರಿ ಬನ್ನೂರು,ಜಯಂತಿ ನಾಯಕ್ ನಿಕಟಪೂರ್ವ ಜಿಲ್ಲಾ ಬಿಜೆಪಿ ಕಾರ್ಯದರ್ಶಿ,ಹಾಗೂ ಮಹಿಳಾ ಮೋರ್ಚಾ ಪದಾಧಿಕಾರಿಗಳು ಆಶಾ ಭಗವಾನ್, ಸುಮತಿ, ಸರೋಜಿನಿ , ಸುಜಾತ, ಸ್ವರ್ಣಲತಾ ಹೆಗ್ಡೆ ಉಪಸ್ಥಿತರಿದ್ದರು.

- Advertisement -