Saturday, June 28, 2025
spot_imgspot_img
spot_imgspot_img

Innovation Conclave ಉದ್ಘಾಟಿಸಿದ ಡಿಸಿಎಂ ಡಾ. ಅಶ್ವಥ್ ನಾರಾಯಣ್

- Advertisement -
- Advertisement -

ಮಂಗಳೂರು: ಕರಾವಳಿ ಭಾಗದ ಸರ್ವಾಂಗೀಣ ಬೆಳವಣಿಗೆಗೆ ವಿಶಿಷ್ಟ ಹೆಜ್ಜೆಯಾಗಿರುವ Beyond Bengaluru Mission Innovation Conclave ಕಾರ್ಯಕ್ರಮವನ್ನು ರಾಜ್ಯದ ಸನ್ಮಾನ್ಯ ಉಪಮುಖ್ಯಮಂತ್ರಿಯವರಾದ ಡಾ. ಅಶ್ವಥ್ ನಾರಾಯಣ್ ಅವರು ಮಂಗಳೂರಿನಲ್ಲಿ ಇಂದು ಉದ್ಘಾಟಿಸಿದರು.

ಉದ್ಯಮಶೀಲತೆ, ಪ್ರತಿಭೆ, ಕೌಶಲ್ಯಕ್ಕೆ ಹೆಸರುವಾಸಿಯಾಗಿರುವ ಕರಾವಳಿಯಲ್ಲಿ ಐಟಿ ಬಿಟಿ ಸೇರಿದಂತೆ ಮತ್ತಷ್ಟು ಉದ್ಯಮಗಳನ್ನು ಸ್ಥಾಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

- Advertisement -

Related news

error: Content is protected !!