Saturday, June 28, 2025
spot_imgspot_img
spot_imgspot_img

ಎರುಂಬು : ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರದಲ್ಲಿ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಎರುಂಬು : ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು , ಅಳಿಕೆ ಇದರ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ಮೇ. 10 ರಂದು ಶುಕ್ರವಾರ ನಡೆಯಿತು.

ಮುಂಬಯಿಯ ಉದ್ಯಮಿ, ಕೊಡುಗೈ ದಾನಿ, ತೀಯಾ ಸಮಾಜ ಮುಂಬಯಿಯ ಅಧ್ಯಕ್ಷ, ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿಯ ಆಡಳಿತ ಮೊಕ್ತೇಸರರಾದ ಕೃಷ್ಣ ಎನ್. ಉಚ್ಚಿಲ್ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ದ ಜೀರ್ಣೋದ್ದಾರ ಕಾರ್ಯವು ನಡೆಯುತ್ತಿದ್ದು ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರರ ಮಾರ್ಗದರ್ಶನದಲ್ಲಿ ತೀಯಾ ಸಮುದಾಯದ ವಿವಿಧ ಕ್ಷೇತ್ರಗಳ ಆಚಾರಪಟ್ಟವರ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಮೇ. 10 ಶುಕ್ರವಾರದಂದು ಪೂರ್ವಾಹ್ನ ಗಂಟೆ 7.39 ರಿಂದ 8.27ರ ಶುಭಮುಹೂರ್ತದಲ್ಲಿ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ನಡೆಯಿತು.

ಕಾರ್ಯಕ್ರಮದ ಯಶಸ್ಸಿಗೆ ಬೊಳ್ನಾಡು ಶ್ರೀ ಭಗವತೀ ತೀಯಾ ಸಮಾಜ ಸೇವಾ ಸಮಿತಿ, ಬೊಳ್ನಾಡು ಶ್ರೀ ಭಗವತೀ ಯುವಜನ ಸಂಘ, ಬೊಳ್ನಾಡು ಶ್ರೀ ಭಗವತೀ ಮಹಿಳಾ ಸಂಘ, ಬೊಳ್ನಾಡು ಶ್ರೀ ಭಗವತೀ ಭಜನಾ ಸಂಘ, ತೀಯಾ ಲಿಟಲ್ ಟೈಗರ್ಸ್ ಬೊಳ್ನಾಡಿ ನ ಎಲ್ಲಾ ಸದಸ್ಯರು ಹಾಗೂ ಭಕ್ತರು ಸಹಕರಿಸಿದರು.

- Advertisement -

Related news

error: Content is protected !!