- Advertisement -
- Advertisement -
ಬೆಂಗಳೂರು ಕೇಂದ್ರದ ರಕ್ಷಣಾ ಉತ್ಪನ್ನಗಳ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಇಂದು ಆಯೋಜಿಸಿದ್ದ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಸಂಬಂಧಿಸಿದ ರಾಯಭಾರಿಗಳ ದುಂಡು ಮೇಜಿನ ವರ್ಚುವಲ್ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿ ಮಾತನಾಡಿದರು.
ಕಳೆದ ಹನ್ನೆರಡು ಏರ್ ಶೋ ಆವೃತ್ತಿಗಳಿಗೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಉತ್ತಮ ಅನುಭವವನ್ನು ಹೊಂದಿದೆ. ಪ್ರಸಕ್ತ ಸಾಲಿನಲ್ಲಿಯೂ ಆಯೋಜಿಸಿರುವ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ ರಾಜ್ಯವಾಗಿ ಈ ಬಾರಿಯೂ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದರು.
- Advertisement -