Wednesday, May 15, 2024
spot_imgspot_img
spot_imgspot_img

ಪುತ್ತೂರು: ಅಮಲು ಪದಾರ್ಥ ಸೇವಿಸಿ ಪೊಲೀಸ್ ಸಿಬ್ಬಂದಿಗೆ ಹಲ್ಲೆ

- Advertisement -G L Acharya panikkar
- Advertisement -

ಪುತ್ತೂರು: ಅಮಲು ಪದಾರ್ಥದ ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿ ನಡೆದಿದೆ.

ಹಲ್ಲೆ ನಡೆಸಿದ ವ್ಯಕ್ತಿ ಬಡಗನ್ನೂರು ಮೂಲದ ಹರೀಶ್ ಎಂದು ಗುರುತಿಸಲಾಗಿದೆ.
ಕುಡಿದ ನಶೆಯಲ್ಲಿ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಗ್ಗೆ ಠಾಣೆಗೆ ಮಾಹಿತಿ ನೀಡಲಾಗಿತ್ತು. ಈ ಸಂದರ್ಭ 112 ತುರ್ತು ಸೇವೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು.

ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ನಶೆಯಲ್ಲಿದ್ದ ವ್ಯಕ್ತಿಯನ್ನು ಸಂಭಾಳಿಸುತ್ತಿದ್ದ ಸಂದರ್ಭ ವ್ಯಕ್ತಿ ಏಕಾಏಕೀ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

- Advertisement -

Related news

error: Content is protected !!