Wednesday, July 22, 2026
spot_imgspot_img
spot_imgspot_img

ನೇಪಾಳದಲ್ಲಿ ಕುಳಿತು ಇನ್ವೆಸ್ಟ್ಮೆಂಟ್ ಫ್ರಾಡ್ ಮೂಲಕ ವಂಚನೆ; ಆರೋಪಿಗಳ ಬಂಧನ

- Advertisement -
- Advertisement -

ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಿತರನ್ನು ಬಂಧಿಸಿದ್ದಾರೆ. ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ಬಂಧಿಸಿದ್ದಾರೆ .

ಅವರಲ್ಲಿ 5 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿರುತ್ತದೆ. ಆರೋಪಿತರ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಬ್ಯಾಂಕ್ ಖಾತೆಗಳ ಮೇಲೆ ಒಟ್ಟು 4580 ಕ್ಕೂ ಹೆಚ್ಚು ಎನ್.ಸಿ.ಆರ್‍.ಪಿ ಪೋರ್ಟಲ್ ನಲ್ಲಿ ಪ್ರಕರಣಗಳು ದಾಖಲಾಗಿದೆ, ಇದರಲ್ಲಿ ಒಂದು ಬ್ಯಾಂಕ್ ಖಾತೆಯಲ್ಲಿ 167 ಕೋಟಿ ಹಣ ವರ್ಗಾವಣೆಯಾಗಿರುತ್ತದೆ. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಬಳಸಿದ 10 ಬ್ಯಾಂಕ್ ಖಾತೆಗಳಲ್ಲಿ ಸುಮಾರು ರೂ 30,70,26,725 ಹಣ ವರ್ಗಾವಣೆ ಆಗಿದ್ದು, ಉಳಿದ 623 ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಪಡೆಯಬೇಕಾಗಿದೆ.

ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣಾ ಅ.ಕ್ರ 02/2026 ಕಲಂ 66(ಸಿ), 66(ಡಿ), ಐಟಿ ಕಾಯ್ದೆ ಕಲಂ 318(4), 308(5) ಬಿಎನ್ ಎಸ್ ಪ್ರಕರಣದಲ್ಲಿ 1 ಕೋಟಿ 38 ಲಕ್ಷ ಹಣವನ್ನು 10 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು, ಸದ್ರಿ ವಂಚಕರು ನೇಪಾಳದಲ್ಲಿ ಕುಳಿತು ವಂಚನೆ ಮಾಡುತ್ತಿದ್ದ ಬಗ್ಗೆ ತನಿಖೆಯಿಂದ ಹಾಗೂ ತಾಂತ್ರಿಕ ವಿಶ್ಲೇಷಣೆಯಿಂದ ಪತ್ತೆ ಹಚ್ಚಿ ವಂಚಕರ ಗ್ಯಾಂಗ್ ನ್ನು ಬಂಧಿಸಿದ್ದಾರೆ.


ಒಂದು ವಂಚಕರ ತಂಡ ನೇಪಾಳದಲ್ಲಿ ಕುಳಿತು ಸಾಮಾಜಿಕ ಜಾಲತಾಣದ ಮೂಲಕ ಖಾತೆದಾರರನ್ನು ಮತ್ತು ಏಜೆಂಟ್ ರವರನ್ನು ನೇಮಕ ಮಾಡಿಕೊಂಡು, ವಂಚನೆಯ ಹಣವನ್ನು ವರ್ಗಾವಣೆ ಮಾಡುವುದು ಹಾಗೂ ಹಣವನ್ನು USDT ನಲ್ಲಿ ಬದಲಾಯಿಸಿ ನಂತರ ವಿದೇಶಕ್ಕೆ ಕಳುಹಿಸುತ್ತಾರೆ.
ಇನ್ನೊಂದು ವಂಚಕರ ತಂಡವು ಕಾಂಬೋಡಿಯಾ ಮತ್ತು ಇತರ ದೇಶಗಳಲ್ಲಿ ಕುಳಿತು ಹೂಡಿಕೆದಾರರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ವಿದೇಶಗಳಿಗೆ ಕೆಲಸಕ್ಕೆ ಹೋಗಿರುವ ಭಾರತೀಯರನ್ನು ಕೂಡಿ ಹಾಕಿ ಅವರ ಮೂಲಕ ಸ್ಥಳೀಯ ಭಾಷೆಯಲ್ಲಿ ಹೂಡಿಕೆದಾರರಿಗೆ ಹೆಚ್ಚು ಹೆಚ್ಚು ಹಣ ಗಳಿಸುವ ಆಮಿಷ ಒಡ್ಡಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿಸುತ್ತಿದ್ದು, ಈ ಹಣದ ವಹಿವಾಟನ್ನು ನೇಪಾಳದಲ್ಲಿರುವ ತಂಡವು ನಿಯಂತ್ರಣ ಮಾಡುತ್ತಿರುವುದು ತಿಳಿದುಬಂದಿರುತ್ತದೆ. ಸೆನ್ ಪೊಲೀ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಉಪಯೋಗಿಸಲು ನೀಡಿದ 10 ಬ್ಯಾಂಕ್ ಖಾತೆಗಳಲ್ಲಿ ದೇಶ್ಯಾದಂತ ಎನ್.ಸಿ.ಆರ್‍.ಪಿ ಪೋರ್ಟಲ್ ನಲ್ಲಿ ಸುಮಾರು 128 ಪ್ರಕರಣಗಳು ಮತ್ತು ಒಟ್ಟು 36 FIR ದಾಖಲಾಗಿರುತ್ತದೆ.

ಮಕವನ್ ವಿಕ್ರಂ (25) ಬಾವಾ ನಗರ್ ಜಿಲ್ಲೆ ಗುಜರಾತ್, ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21) ಪಶ್ಚಿಮ ಬಂಗಾಳ, ಪುಪ್ಲ ಶಿವ ಕುಮಾರ್ ರಾವ್ (32) ಸಿಂಗಬುಮ್ ಜಿಲ್ಲೆ ಜಾರ್ಖಾಂಡ್, ಗೌರವ್ ಪಾಂಡೆ (24) ಮಾವೋ ಜಿಲ್ಲೆ ಉತ್ತರ ಪ್ರದೇಶ, ಹರ್ಷ್ ಮಿಸ್ರಾ (22) ಸುಲ್ತಾನ್ ಪುರ್ ಜಿಲ್ಲೆ ಉತ್ತರ ಪ್ರದೇಶ, ರಾಜೇಶ್ ಮಂಡನ್ (30)ಡಿಯೋಗರ್ ಜಿಲ್ಲೆ ಜಾರ್ಖಾಂಡ್, ಮೊಹಮ್ಮದ್ ಆಕೀಬ್ ಅಲಿ (27) ಲಕ್ನೋ ಜಿಲ್ಲೆ ಉತ್ತರ ಪ್ರದೇಶ, ರಾಜೀವ್ ರಂಜನ್ ಕುಮಾರ್ (30) ನಳಂದ ಜಿಲ್ಲೆ ಬಿಹಾರ್, ಮಿಥುನ್ ಕುಮಾರ್ ಮಂಗರಾಜ್ (38) ಸಿಂಗಬುಮ್ ಜಿಲ್ಲೆ ಜಾರ್ಖಾಂಡ್, ನೌಶಾದ್ ಅಲಿ (34) ಝಾನ್ಸಿ ಜಿಲ್ಲೆ ಉತ್ತರ ಪ್ರದೇಶ ಹಾಗೂ ಓಂ ಪ್ರಕಾಶ್ ಯಾಧವ್ (37) ಜೈಪುರ್ ರಾಜಸ್ಥಾನ ಬಂಧನಕ್ಕೊಳಗಾದ ಆರೋಪಿಗಳು.

ಬ್ಯಾಂಕ್ ಖಾತೆಗಳನ್ನು ಪಡೆಯಲು ವಂಚಕರು ಅನುಸರಿಸುವ ವಿಧಾನಗಳು ಹೀಗಿವೆ:
ವಂಚಕರು ಬೇರೆ ಬೇರೆ ಕಂಪನಿಯ ಹೆಸರಿನಲ್ಲಿ ಇನ್ ಸ್ಟಾಗ್ರಾಂ ಹಾಗೂ ಟೆಲಿಗ್ರಾಂ ಖಾತೆಗಳ ಮೂಲಕ ತಮ್ಮ ನಿಜವಾದ ಹೆಸರುಗಳನ್ನು ಮರೆ ಮಾಚಿ ಜಾಹೀರಾತು ಮೂಲಕ ಕಾರ್ಪೋರೇಟ್ ಖಾತೆಗಳು, ಕರೆಂಟ್ ಖಾತೆಗಳು, USDT TO INR Exchange, ಮ್ಯಾನೇಜ್ಮೆಂಟ್ ಆಪರೇಟರ್‍ ಗಳು ಮತ್ತು OTPವರ್ಕರ್‍ಸ್ ಬೇಕಾಗಿದ್ದಾರೆ ಎಂಬುದಾಗಿ ಟೆಲಿಗ್ರಾಂ ಮತ್ತು ಇನ್ಸಾಟ್ರಾ ಗ್ರಾಂ ಮೂಲಕ ಬ್ಯಾಂಕ್ ಖಾತೆದಾರರನ್ನು ಸಂಪರ್ಕಿಸುತ್ತಾರೆ.

ದುರಾಸೆಗೊಳಗಾದವರು ಅವರನ್ನು ಸಂಪರ್ಕಿಸಿದಾಗ 5% ರಿಂದ 10% ಕಮಿಷನ್ ಕೊಡುವುದಾಗಿ ಮತ್ತು ಅವರಿಗೆ ಬೇಕಾದ ವಿಮಾನ ಟಿಕೇಟ್, ಕ್ಯಾಬ್ ಬುಂಕಿಂಗ್, ಹೋಟೇಲ್, ಲಾಡ್ಜ್ ವ್ಯವಸ್ಥೆ ನೀಡಿವುದಾಗಿ ಹಾಗೂ ಇವರಿಗೆ ವಿವಿಧ ರೀತಿಯ ಆಮಿಷಗಳನ್ನು ನೀಡಿ, ದುಬೈ, ನೇಪಾಳ ಮುಂತಾದ ಕಡೆಗಳಲ್ಲಿ ಕರೆಸಿಕೊಳ್ಳುತ್ತಾರೆ. ನಂತರ ಖಾತೆದಾರರನ್ನು ಮತ್ತು ಖಾತೆಗಳನ್ನು ಪೂರೈಸುವವರನ್ನು ಒಂದು ನಿರ್ದಿಷ್ಟವಾದ ಸ್ಥಳದಲ್ಲಿ ವ್ಯವಸ್ಥೆ ಮಾಡಿರುತ್ತಾರೆ. ವಂಚಕರು ತಮಗೆ ಸೇರಿದ ವಿವಿಧ ಕಂಪನಿಯ ಮೊಬೈಲ್ ಫೋನ್ ಗಳಿಗೆ ಖಾತೆದಾರರ ಸಿಮ್ ಗಳನ್ನು ಹಾಕಿಕೊಂಡು, ನೆಟ್ ಬ್ಯಾಂಕಿಂಗ್ ಮುಖಾಂತರ ವಂಚನೆಯ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ. ವಂಚಕರು ವಂಚನೆ ಮಾಡಿದ ಹಣದಿಂದ USDT ಗಳನ್ನು ಬೇರೆ ಬೇರೆ ಕಡೆಯಿಂದ ಖರೀದಿ ಮಾಡಿ, ಪ್ರತಿದಿನ ವಿದೇಶದಲ್ಲಿನ ಆರೋಪಿತರಿಗೆ ಕಳುಹಿಸುತ್ತಾರೆ.

ಡಿಜಿಟಲ್ ಸ್ಲೇವರಿ:
ವಿದೇಶಗಳಲ್ಲಿ ಕೆಲಸಕ್ಕಾಗಿ ನೋಡುತ್ತಿರುವ ಯುವಕರಿಗೆ ನಕಲೀ ಜಾಹಿರಾತುಗಳ, ಏಜೆಂಟ್ ಗಳ ಮೂಲಕ ನಂಬಿಸಿ, ಪುಸಲಾಯಿಸಿ ಅವರನ್ನು ಟೂರಿಸ್ಟ್ ವೀಸಾ ದಲ್ಲಿ ಮಧ್ಯ ಪ್ರಾಂಚ್ಯ ದೇಶಗಳಿಗೆ ಕರೆದುಕೊಂಡು ಹೋಗಿ ಅವರಿಂದ ದಾಖಲೆಗಳನ್ನು ಮತ್ತು ಪಾಸ್ ಪೋರ್ಟ್ ತೆಗೆದುಕೊಂಡು ಅವರನ್ನು ಅಲ್ಲಿ ಗೊತ್ತಿರದೇ ಇರುವ ಸ್ಥಳದಲ್ಲಿ ಬಂಧಿಸುತ್ತಾರೆ. ಅವರಿಂದ ಒತ್ತಾಯ ಪೂರಕವಾಗಿ ಮುಗ್ದ ಹೂಡಿಕೆದಾರರಿಗೆ ಅವರ ಮಾತೃ ಭಾಷೆಯಲ್ಲೇ ಮಾತನಾಡಿಸಿ ಪುಸಲಾಯಿಸಿ ಹಣ ವರ್ಗಾಹಿಸುವಂತೆ ಮಾಡಿಸುತ್ತಾರೆ. ಅವರಿಗೆ ಸರಿಯಾಗಿ ಊಟ ಉಪಹಾರ ನೀಡದೇ ಹಾಗೂ ಕುಟುಂಬದವರೊಂದಿಗೆ ಸಂಪರ್ಕವನ್ನು ಮಾಡಲು ಅವಕಾಶ ಕೊಡದೇ ಕೂಡಿ ಹಾಕಿ ಭಾರತದ ನಾಗರೀಕರಿಗೆ ವಂಚನೆ ಮಾಡಲು ಭಾರತೀಯರನ್ನೇ ಬಳಸುತ್ತಿದ್ದು, ಈ ಬಗ್ಗೆ ಯುವಕರು ಎಚ್ಚರಿಕೆಯಿಂದ ಇರುವುದು.
ಉದ್ಯೋಗಕ್ಕೆ ವಿದೇಶಗಳಿಗೆ ಏಜೆನ್ಸಿ ಮೂಲಕ ಹೋಗುವ ಯುವಕರು ಪ್ರೊಟೆಕ್ಟ್ಸ್ ಆಫ್ ಇಮಿಗ್ರೇಟ್ಸ್ ಬಳಿ ನೊಂದಣಿ ಆಗಿರುವ ಏಜೆನ್ಸಿ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದು ಅವರ ಮೂಲಕವಷ್ಟೇ ಕೆಲಸಗಳನ್ನು ಪಡೆದು, ಚೆಕ್ ಮಾಡಿ ಉದ್ಯೋಗಕ್ಕೆ ವಿದೇಶಕ್ಕೆ ಹೋಗುವುದು ಉತ್ತಮ.

ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 06 ಜನರನ್ನು ವಿದೇಶದಲ್ಲಿ ಉತ್ತಮ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅವರನ್ನು ಸೈಬರ್ ಸ್ಲೇವರಿ ಆಗಿ ಕೆಲಸ ಮಾಡಿಸುತ್ತಿದ್ದವರನ್ನು ರಕ್ಷಿಸಲಾಗಿದ್ದು, ಅವರು ನೀಡದ ದೂರಿನ ಮೇಲೆ ಪ್ರಕರಣ ಕೂಡ ದಾಖಲಾಗಿರುತ್ತದೆ.

ವಂಚಕರು ವಂಚನೆಯಾದ ಹಣದಲ್ಲಿ ಆನ್ ಲೈನ್ ಮೂಲಕ USDT ಗಳನ್ನು ಖರೀದಿ ಮಾಡಿಕೊಂಡು ಅದೇ ದಿನ ಬೇರೆ ದೇಶಗಳಿಗೆ ಕಳುಹಿಸುವುದರಿಂದ ವಿದೇಶಕ್ಕೆ ಹಣ ಹೋಗುತ್ತದೆ. ವಂಚನೆಗೊಳಗಾದ ದೂರುದಾರರು ಅದೇ ದಿನ ದೂರನ್ನು ನೀಡಲು ವಿಳಂಬ ಮಾಡುವುದರಿಂದ ಹಣ ಮರಳಿ ಸಿಗುವುದು ಕಷ್ಟವಾಗಿರುತ್ತದೆ.

ಬ್ಯಾಂಕ್ ಖಾತೆ ನೀಡುವವರು ಎಚ್ಚರದಿಂದಿರಬೇಕು, ಕಮೀಷನ್ ಆಸೆಗೆ ಒಳಗಾಗಿ ಬ್ಯಾಂಕ್ ಖಾತೆಯನ್ನು ವಂಚಕರಿಗೆ ನೀಡಿದಲ್ಲಿ ಖಾತೆದಾರರು ಸಹ ಆರೋಪಿತರಾಗುತ್ತಾರೆ. ಮುಖ್ಯ ವಂಚಕರು ವಿದೇಶದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದರಿಂದ ಪ್ರಮುಖ ಆರೋಪಿಗಿಂತ ಮೊದಲೇ ಕಮಿಷನ್ ಆಸೆಗೆ ಒಳಗಾದವರು ಕಾನೂನು ಪ್ರಕಾರ ಶೀಘ್ರವಾಗಿ ದಸ್ತಗಿರಿಯಾಗುತ್ತಾರೆ.

ಹೂಡಿಕೆದಾರರು ಕೂಡ ವಿದೇಶದಲ್ಲಿ ಕುಳಿತುಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ರೀತಿಯ ಆಕರ್ಷಿತ ಜಾಹೀರಾತುಗಳನ್ನು ನೋಡಿ, ಹೆಚ್ಚಿನ ಲಾಭಾಂಶದ ವಂಚನೆಗೆ ಒಳಗಾಗಬೇಡಿ ಹಾಗೂ ಹೂಡಿಕೆಯನ್ನು ಮಾಡುವಾಗ ನಕಲಿ ಸೆಬಿ ಸರ್ಟಿಪೀಕೇಟ್, ನಕಲಿ ಡಿಮೇಟ್ ಖಾತೆಗಳನ್ನು ನೋಡಿ ಮೋಸ ಹೋಗಬೇಡಿ. ಹೆಚ್ಚು ಹಣ ಗಳಿಸಬೇಕೆಂಬ ಆಸೆಗೆ ಬಿದ್ದ ಹೆಚ್ಚಿನ ವಿದ್ಯಾವಂತರು ಇತ್ತಿಚೀನ ದಿನಗಳಲ್ಲಿ ಆನ್ ಲೈನ್ ಹೂಡಿಕೆ, ಹಣ ದ್ವಿಗುಣ, ಟ್ರೇಡಿಂಗ್ ಹೂಡಿಕೆಯಲ್ಲಿ ವಿಚಾರಿಸದೇ ವಂಚಕರ ಮೋಸದ ಬಲೆಗೆ ಬಿದ್ದು, ಹಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದೆ.
ಹೂಡಿಕೆ ಮಾಡಬೇಕಾದರೆ ಸೆಬಿ ರಿಜಿಸ್ಟ್ರೇಷನ್ ಆಗಿರುವ ಸಂಸ್ಥೆ ಅಥವಾ ಬ್ರೋಕರ್ ರವರಲ್ಲಿ ಡಿಮ್ಯಾಟ್ ಮತ್ತು ಟ್ರೇಡಿಂಗ್ ಅಕೌಂಟ್ ಮಾಡಿಸುವುದು. ಹೆಚ್ಚಿನ ಲಾಭಾಂಶ ಭರವಸೆಯ ಹೂಡಿಕೆ ಬಗ್ಗೆ ಅತೀ ಹೆಚ್ಚಿನ ಕಾಳಜಿ ಅವಶ್ಯವಾಗಿದೆ.

ವಂಚಕರಿಂದ ವಶಪಡಿಸಿಕೊಂಡ ಸೊತ್ತುಗಳ ವಿವರ

  • ಲ್ಯಾಪ್ ಟಾಪ್ -1,
  • ಮೊಬೈಲ್ ಪೋನ್ ಗಳು-21
  • ವಿವಿಧ ಕಂಪನಿಯ ಸಿಮ್ ಕಾರ್ಡ್ ಗಳು – 20
  • ಬೇರೆ ಬೇರೆ ಬ್ಯಾಂಕ್ ಡೆಬಿಟ್ ಕ್ರೆಡಿಟ್ ಕಾರ್ಡ್ ಗಳು – 20

ಸೈಬರ್ ವಂಚನೆಗೆ ಪರಿಹಾರಗಳು:

  • ವಂಚನೆಯಾದ ಒಂದು ಗಂಟೆಯ ಒಳಗೆ 1930 ಗೆ ಕರೆ ಮಾಡುವುದು ಹಾಗೂ ಹತ್ತಿರದ ಪೊಲೀಸ್ ಠಾಣೆಗೆ ತಕ್ಷಣವೇ ದೂರು ಸಲ್ಲಿಸುವುದು.
  • ಆನ್ ಲೈನ್ ಗೇಮ್, ನಕಲಿ ಲೋನ್ ಆ್ಯಪ್, ನಕಲಿ ಪಾರ್ಟ ಟೈಮ್ ಜಾಬ್, ನಕಲಿ ಜಾಬ್ ಆಫರ್, ಗಳಿಂದ ದೂರ ಇರುವುದು.
  • APK ಫೈಲ್ ಮತ್ತು ಲಿಂಕ್ ಗಳ ಬಗ್ಗೆ ಜಾಗ್ರತೆಯಿಂದ ಇರುವುದು.
  • ಸಾಮಾಜಿಕ ಜಾಲತಾಣಗಳಲ್ಲಿ ಬರುವ ಜಾಹೀರಾತುಗಳು, ಆಕರ್ಷಿಕ ಹೂಡಿಕೆಗಖ ಬಗ್ಗೆ ಜಾಗ್ರೂತರಾಗಿರವುದು
  • ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ಪ್ರೇಮ, ಗೆಳೆತನದ ಮೂಲಕ ಬ್ಯಾಂಕ್ ಖಾತೆಗಳನ್ನು ಮತ್ತು ಸಿಮ್ ಗಳನ್ನು ನೀಡುವುದು, ನಿಮ್ಮ ಅರೆ ನಗ್ನ, ಮತ್ತು ನಗ್ನ ಚಿತ್ರಗಳನ್ನು ಹಂಚಿಕೊಳ್ಳುವುದು, ಗಿಫ್ಟ್ ಕಳುಹಿಸುವುದಾಗಿ ವಂಚನಗೆ ಒಳಗಾಗಿ ಹಣವನ್ನು ಕಳುಹಿಸುವುದರಿಂದ ದೂರವಿರಿ.
  • ವಿಡೀಯೋ ಕಾಲ್ ಮೂಲಕ ಸಿಬಿಐ, ಪೊಲೀಸ್, ಜಡ್ಜಸ್, ಕಸ್ಟಮ್ಸ್, ಸೆಬಿ, ಟ್ರಾಯ್, ಮುಂತಾದ ಇಲಾಖೆಗಳನ್ನು ಬಳಸಿಕೊಳ್ಳುವ ನಕಲಿ ಅಧಿಕಾರಿಗಳಂತೆ ನಟಿಸಿ, ನಿಮಗೆ ದಸ್ತಗಿರಿ ಬೆದರಿಕೆ ನೀಡಿ ಹಣವನ್ನು ಲೂಟಿ ಮಾಡುವ ವ್ಯಕ್ತಿಗಳಿಂದ ದೂರವಿರಿ. ಯಾವುದೇ ವಿಡೀಯೋ ಕಾಲ್ ಮೂಲಕ ದಸ್ತಗಿರಿ ಮಾಡುವ ಕ್ರಮವನ್ನು ಯಾವ ಇಲಾಖೆಯೂ ಅನುಸರಿಸುತ್ತಿಲ್ಲ. ಹಾಗೂ ಭಾರತೀಯ ಕಾನೂನಿನಲ್ಲಿ ಇರುವುದಿಲ್ಲ. ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡುವುದು.
  • ಆನ್ ಲೈನ್ ಮೂಲಕ ಹೋಟೆಲ್, ಕ್ಯಾಬ್, ಫ್ಲೈಟ್ಸ್ ಬುಕ್ಕಿಂಗ್ ಮಾಡುವಾಗ ಎಚ್ಚರದಿಂದರಬೇಕು.
  • ಗೂಗಲ್ ನಲ್ಲಿ ಸಿಗುವಂತಹ ಯಾವುದೇ ಕಸ್ಟಮರ್ ಕೇರ್ ಗಳ ಬಗ್ಗೆ ಎಚ್ಚರದಿಂದರಬೇಕು ಹಾಗೂ ಯಾವುದೇ ಓಟಿಪಿಗಳನ್ನು ಶೇರ್ ಮಾಡದೇ ಇರುವುದು.
- Advertisement -

Related news

error: Content is protected !!