Monday, June 30, 2025
spot_imgspot_img
spot_imgspot_img

ಮಂಗಳೂರು: ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್ ಜೈನ್‌ ವರ್ಗಾವಣೆ; ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕ

- Advertisement -
- Advertisement -

ಮಂಗಳೂರು: ರಾಜ್ಯ ಸರ್ಕಾರ ಹಲವು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು, ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಯಾವುದೆ ಹುದ್ದೆ ತೋರಿಸಿದೆ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.

ಇನ್ನು ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

- Advertisement -

Related news

error: Content is protected !!