Friday, May 23, 2025
spot_imgspot_img
spot_imgspot_img

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ:ಇಬ್ಬರು ಪೊಲೀಸರು ಹುತಾತ್ಮ

- Advertisement -
- Advertisement -

ಶ್ರೀನಗರ: ದೇಶದೆಲ್ಲಡೆ ಸ್ವಾತಂತ್ರ್ಯ ದಿನಾಚರಣೆಯ ಸಿದ್ದತೆ ನಡೆಯುತ್ತಿರುವ ಹೊಸ್ತಿಲಲ್ಲೇ ಉಗ್ರರ ಉಪಟಳ ಜೋರಾಗಿದೆ. ಶುಕ್ರವಾರ ಜಮ್ಮು-ಕಾಶ್ಮೀರದ ನೌಗಮ್ ಬೈಪಾಸ್ ಬಳಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮೂವರು ಸಿಬ್ಬಂದಿಗೆ ಗಾಯಗಳಾಗಿವೆ.

ಶ್ರೀನಗರ ನಗರದ ಹೊರಲಯದಲ್ಲಿರುವ ಪೊಲೀಸ್ ಸಿಬ್ಬಂದಿ ಮೇಲೆ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದ್ದಾರೆ.

3 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರಲ್ಲಿ 02 ಮಂದಿ ಹುತಾತ್ಮರಾದರು. ಪ್ರದೇಶವನ್ನು ನಮ್ಮ ತಂಡ ಸುತ್ತುವರಿದಿದೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಗುರುವಾರ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೊರಾದಲ್ಲಿ ಭದ್ರತಾ ಪಡೆಗಳು ಮೂರು ಭಯೋತ್ಪಾದಕರ ಅಡಗುತಾಣಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ದಾಳಿಯ ಸಂದರ್ಭದಲ್ಲಿ ಪತ್ತೆ ಹಚ್ಚಿದ್ದಾರೆ.

- Advertisement -

Related news

error: Content is protected !!