ಬೆಳ್ಳಿಪ್ಪಾಡಿ: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು 16-01-2024 ಹಾಗೂ 17-01-2024 ರಂದು ನಡೆಯಲಿರುವುದು
16-01-2024ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿರುವುದು. ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ ನಡೆಯಲಿರುವುದು. ಬ್ರಹ್ಮ ಶ್ರೀ ವೇದಮೂರ್ತಿ ನಾಗೇಶ್ ತಂತ್ರಿ ಇವರ ನೇತೃತ್ವದಲ್ಲಿ ರಾತ್ರಿ ಕಿರುಷಷ್ಠಿ ಉತ್ಸವ ಮತ್ತು ಕಟ್ಟೆ ಪೂಜೆ ನಡೆಯಲಿದ್ದು, ಬಳಿಕ ಅನ್ನ ಸಂತರ್ಪಣೆ ನಡೆಯಲಿರುವುದು.
ಸಂಜೆ ಗಂಟೆ 6 ರಿಂದ ಕಲ್ಲಡ್ಕ ವಿಠಲ ನಾಯಕ್ ಮತ್ತು ಬಳಗದವರಿಂದ “ಹಾಸ್ಯ-ಸಂಗೀತ-ಸಂದೇಶ” ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
17-01-2024 ನೇ ಬುಧವಾರ ಬೆಳಿಗ್ಗೆ 9 ಗಂಟೆಗೆ ಶ್ರೀ ಸುಬ್ರಹ್ಮಣ್ಯ ದೇವರದರ್ಶನ ಬಲಿ, ಬಟ್ಟಲು ಕಾಣಿಕೆ ನಂತರ ಮಹಾಪೂಜೆ ನಡೆಯಲಿರುವುದು, ಬಳಿಕ ಮಹಾ ಅನ್ನ ಸಂತರ್ಪಣೆ ಜರಗಲಿರುವುದು. ಹಾಗೂ ಕೂಟೇಲಿನಿಂದ ಭಂಡಾರ ಬಂದು ಹುಲಿಚಾಮುಂಡಿ ನೇಮ ಜರಗಲಿರುವುದು ಎಂದು ಬೆಳ್ಳಿಪ್ಪಾಡಿ ಸಂಜೀವ ರೈ ಎಲಿಯಾ ಗೌರವ ಯಜಮಾನ, ಬೆಳ್ಳಿಪ್ಪಾಡಿ ಶ್ರೀಮತಿ ಆಳ್ವ ನೆಲ್ತೊಟ್ಟು ಗೌರವಾಧ್ಯಕ್ಷರು ,ಬೆಳ್ಳಿಪ್ಪಾಡಿ ನೇಮಿರಾಜ್ ರೈ ಪದಾಧಿಕಾರಿಗಳು ಹಾಗೂ ಸದಸ್ಯರು ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ರಿ. ಮತ್ತು ಬೆಳ್ಳಿಪ್ಪಾಡಿ ಕುಟುಂಬಸ್ಥರು, ಅರ್ಚಕರು ಹಾಗೂ ಬೆಳ್ಳಿಪ್ಪಾಡಿ ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.